Advertisement
ಸುದ್ದಿಗಳು

ಸಿಎಂ ಆಯ್ಕೆ ಕಸರತ್ತು | ಈ ಮಧ್ಯೆ ನೂತನ ಸಚಿವರ ಶಾರ್ಟ್ ಲಿಸ್ಟ್ ರೆಡಿ | ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

Share

ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ  ಅವರೊಂದಿಗೆ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ.

ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸರಿಯಾಗಿ ಕಾರ್ಯನಿರ್ವಹಿಸದವರಿಗೆ ಸ್ಥಾನ ನೀಡಬಾರದು, ಈ ಬಾರಿ ಉತ್ತಮ ಸರ್ಕಾರ ನೀಡಬೇಕು ಎಂದು ಚರ್ಚೆ ನಡೆದಿದ್ದು,  ಯುವ ಶಾಸಕರಿಗೆ ಹೆಚ್ಚಿನ ಅವಕಾಶ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ.

ಸದ್ಯ ಸಂಭಾವ್ಯ ಸಚಿವರ ಪಟ್ಟಿ

  • ಬೆಳಗಾವಿ – ಲಕ್ಷ್ಮಣ್ ಸವಧಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ
  • ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
  • ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
  • ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್
  • ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
  • ಯಾದಗಿರಿ – ಶರಣಪ್ಪ ದರ್ಶನಾಪುರ್
  • ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ
  • ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
  • ಗದಗ – ಎಚ್‌.ಕೆ. ಪಾಟೀಲ್
  • ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್
  • ಉತ್ತರ ಕನ್ನಡ – ಭೀಮಣ್ಣ ನಾಯಕ್
  • ಹಾವೇರಿ – ರುದ್ರಪ್ಪ ಲಮಾಣಿ
  • ಬಳ್ಳಾರಿ – ತುಕಾರಾಮ್‌, ನಾಗೇಂದ್ರ
  • ಚಿತ್ರದುರ್ಗ – ರಘುಮೂರ್ತಿ
  • ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ
  • ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
  • ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
  • ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
  • ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
  • ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮೀ
  • ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
  • ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ
  • ಮಂಗಳೂರು- ಯುಟಿ ಖಾದರ್
  • ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್
  • ​ಚಾಮರಾಜನಗರ- ಪುಟ್ಟರಂಗಶೆಟ್ಟಿ
  • ಕೊಡಗು- ಎಎಸ್​ ಪೊನ್ನಣ್ಣ
  • ಬೆಂಗಳೂರು ಗ್ರಾಮಾಂತರ. ಕೆ ಎಚ್​​ ಮುನಿಯಪ್ಪ

ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು

  • ಬಿ.ಕೆ. ಹರಿಪ್ರಸಾದ್
  • ಸಲೀಂ ಅಹಮದ್
  • ನಜೀರ್‌ ಅಹಮದ್
  • ಮಂಜುನಾಥ್‌ ಬಂಡಾರಿ
  • ದಿನೇಶ್‌ ಗೂಳಿಗೌಡ
  • ಎಸ್. ರವಿ

ಒಟ್ಟಿನಲ್ಲಿ ಸಿಎಂ ಆಯ್ಕೆ ಬೆನ್ನಲ್ಲೇ ಸಚಿವ ಸಂಪುಟ ರಚನೆ ದೊಡ್ಡ ಸವಾಲ್​ ಆಗಿದ್ದು, ಯಾವ ರೀತಿಯಾಗಿ ಸಚಿವ ಸ್ಥಾನ ಹಂಚಿಕೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

22 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago