ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

April 17, 2023
10:40 AM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

Advertisement
Advertisement

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ
June 26, 2025
10:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group