ಸುದ್ದಿಗಳು

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

Advertisement

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |

ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…

2 hours ago

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…

3 hours ago

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ  ತೆರವುಗೊಳಿಸಬಾರದು ಎಂದು…

9 hours ago

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…

9 hours ago

ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…

9 hours ago

ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…

9 hours ago