Advertisement
ಸುದ್ದಿಗಳು

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

21 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

22 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

23 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago