Advertisement
ಸುದ್ದಿಗಳು

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

20 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

21 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

21 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago