Advertisement
ಸುದ್ದಿಗಳು

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

51 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago