Advertisement
ಸುದ್ದಿಗಳು

ಜನಸಾಮಾನ್ಯರ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ : ಮುಖ್ಯಮಂತ್ರಿಗಳ ಆಸ್ತಿ ಎಷ್ಟು ಗೊತ್ತಾ?

Share

 ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ತಮ್ಮ ಹಾಗೂ ಕುಟುಂಬದ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ. ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಹೌದು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅವರ ಕುಟುಂಬಸ್ಥರ ಹೆಸರಿನಲ್ಲಿ 5.98 ಕೋಟಿ ರೂ. ಚರಾಸ್ತಿ ಸೇರಿದಂತೆ ಒಟ್ಟು 22.95 ಕೋಟಿ ರೂ. ಸ್ಥಿರಾಸ್ತಿ ಇದೆ. ಇದೇ ವೇಳೆ ಸಿಎಂ ತಮ್ಮ ಬಳಿ ಸ್ವಂತ ವಾಹನವಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಒಟ್ಟು 5.79 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾರೆ. ತಮ್ಮ ಹಿಂದೂ ಅವಿಭಜಿತ ಕುಟುಂಬದಲ್ಲಿ 1.57 ಕೋಟಿ ರೂಪಾಯಿ ಚರಾಸ್ತಿ,19.20 ಕೋಟಿ ರೂ. ಸ್ಥಿರಾಸ್ತಿ ಇದೆ ಎಂದು ತಿಳಿಸಿದ್ದಾರೆ. ಪುತ್ರಿ ಹೆಸರಲ್ಲಿ 1.28 ಕೋಟಿ ರೂಪಾಯಿ ಚರಾಸ್ತಿ, ಸಿಎಂ ಅವರ ಕೈಯಲ್ಲಿ 3 ಲಕ್ಷ ರೂಪಾಯಿ ನಗದು, ಪತ್ನಿ ಕೈಯಲ್ಲಿ 50,000 ರೂಪಾಯಿ ನಗದು, ಪುತ್ರಿ ಅದಿತಿ ಬೊಮ್ಮಾಯಿ ಕೈಯಲ್ಲಿ 25,000 ರೂ ನಗದು ಇರುವುದಾಗಿ ಮಾಹಿತಿ ನೀಡಿದ್ದಾರೆ.

ಬೊಮ್ಮಾಯಿ ಅವರ ಬಳಿ ವಿವಿಧ ಬ್ಯಾಂಕ್‌ಗಳಲ್ಲಿ 40 ಲಕ್ಷ ರೂ.ಗೂ ಹೆಚ್ಚು ಠೇವಣಿ ಇದೆ. ಪತ್ನಿ ಬಳಿ 27.6 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದಾರೆ. ವಿವಿಧ ಕಂಪನಿಗಳಲ್ಲಿ ಅವರು 3.23 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪತ್ನಿ ಚನ್ನಮ್ಮಾ ಅವರು ಸುಮಾರು 7 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪುತ್ರಿ ಹೆಸರಲ್ಲೂ 23 ಲಕ್ಷ ರೂಪಾಯಿ ಹೂಡಿಕೆ ಮಾಡಲಾಗಿದೆ. ಅವಿಭಕ್ತ ಕುಟುಂಬದಿಂದ ಬಸವರಾಜ ಬೊಮ್ಮಾಯಿ 1.42 ಕೋಟಿ ರೂಪಾಯಿ ಸಾಲವಿದೆ.

ಇನ್ನು, ಚಿನ್ನಾಭರಣ ವಿವರ ನೋಡುವುದಾದರೆ ಸಿಎಂ ಬೊಮ್ಮಾಯಿ ಬಳಿ 1.50 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಪತ್ನಿ ಬಳಿ 78.83 ಲಕ್ಷ ರೂಪಾಯಿ ಚಿನ್ನಾಭರಣ, ಪುತ್ರಿ ಬಳಿ 53.84 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಕುಟುಂಬದ ಬಳಿ 13.78 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿವೆ.

ಸ್ಥಿರಾಸ್ತಿ ವಿವರಗಳನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿ ಬಳಿ 1 ಕೃಷಿ ಜಮೀನಿದ್ದು, ಕುಟುಂಬದ ಬಳಿ ಒಂದು ಜಮೀನು ಇದೆ. ಬೆಂಗಳೂರಿನ ಯಲಹಂಕ ಹಾಗೂ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಅವರು ತಲಾ ಒಂದು ಎಕರೆ ಕೃಷಿಯೇತರ ಭೂಮಿ ಹೊಂದಿದ್ದಾರೆ. ಕುಟುಂಬದ ಹೆಸರಲ್ಲಿ ಹುಬ್ಬಳ್ಳಿಯ ನಾಲ್ಕು ಎಕರೆ ಕೃಷಿಯೇತರ ಭೂಮಿ ಇದೆ.

ಧಾರವಡದ ಇಂಡಸ್ಟ್ರಿಯಲ್‌ ಏರಿಯಾದಲ್ಲಿ, ದೊಡ್ಡಬಳ್ಳಾಪುರದಲ್ಲಿ ಹಾಗೂ ಕಾರಾವರದಲ್ಲಿ ಬೊಮ್ಮಾಯಿ ಹೆಸರಿನಲ್ಲಿ ವಾಣಿಜ್ಯ ಕಟ್ಟಡಗಳು. ಶಿಗ್ಗಾಂವಿಯಲ್ಲಿ ಅವರಿಗೆ ಮನೆಯಿದ್ದರೆ, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ಫ್ಲ್ಯಾಟ್‌, ಕುಟುಂಬದ ಹೆಸರಲ್ಲಿ ಹುಬ್ಬಳ್ಳಿಯಲ್ಲಿ ಹಾಗೂ ಬೆಂಗಳೂರಿನ ಆರ್‌ಟಿ ನಗರದಲ್ಲಿ ಮನೆ ಇದೆ. ಒಟ್ಟು ಬೊಮ್ಮಾಯಿ ಬಳಿ 22.95 ಕೋಟಿ ರೂಪಾಯಿ ಸ್ಥಿರಾಸ್ತಿ ಹಾಗೂ ಕುಟುಂಬದ ಬಳಿ 19.20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.

ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ ಪಡೆದುಕೊಂಡಿದ್ದು, ಐಸಿಐಸಿಐ ಬ್ಯಾಂಕ್‌ನಲ್ಲಿ 47.35 ಲಕ್ಷ ರೂಪಾಯಿ ಸಾಲ, ಎಸ್‌ಬಿಐನಲ್ಲಿ 37.47 ಲಕ್ಷ ರೂಪಾಯಿ ಗೃಹ ಸಾಲವಿದೆ. 79 ಸಾವಿರದ ಇನ್ನೊಂದು ಗೃಹ ಸಾಲವೂ ಎಸ್‌ಬಿಐನಲ್ಲಿದೆ. ಕುಟುಂಬದಿಂದ 1.42 ಕೋಟಿ ರೂಪಾಯಿ ಸಾಲವನ್ನು ಬೊಮ್ಮಾಯಿ ಪಡೆದುಕೊಂಡಿದ್ದಾರೆ. 9 ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದಲೂ ಅಪಾರ ಪ್ರಮಾಣದ ಸಾಲ ಪಡೆದುಕೊಂಡಿದ್ದು, ಒಟ್ಟು 5.79 ಕೋಟಿ ರೂಪಾಯಿ ಸಾಲ ಹೊಂದಿದ್ದಾರೆ.

ಇನ್ನು 2021-22ರಲ್ಲಿ 41.09 ಲಕ್ಷ ರೂಪಾಯಿ ಆದಾಯ ಗಳಿಸಿರುವುದಾಗಿ ಬೊಮ್ಮಾಯಿ ಹೇಳಿದ್ದು, ಪತ್ನಿ ಆದಾಯ 2.69 ಲಕ್ಷ ರೂಪಾಯಿ ಎಂದು ಘೋಷಿಸಿಕೊಂಡಿದ್ದಾರೆ. ವಿಶೇಷವೆಂದರೆ ತಾವಾಗಲಿ, ತಮ್ಮ ಕುಟುಂಬದವರ ಬಳಿಯಾಗಲಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

22 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago