Advertisement
ಸುದ್ದಿಗಳು

ಜನಸಾಮಾನ್ಯರ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ : ಮುಖ್ಯಮಂತ್ರಿಗಳ ಆಸ್ತಿ ಎಷ್ಟು ಗೊತ್ತಾ?

Share

 ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ತಮ್ಮ ಹಾಗೂ ಕುಟುಂಬದ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ. ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಹೌದು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅವರ ಕುಟುಂಬಸ್ಥರ ಹೆಸರಿನಲ್ಲಿ 5.98 ಕೋಟಿ ರೂ. ಚರಾಸ್ತಿ ಸೇರಿದಂತೆ ಒಟ್ಟು 22.95 ಕೋಟಿ ರೂ. ಸ್ಥಿರಾಸ್ತಿ ಇದೆ. ಇದೇ ವೇಳೆ ಸಿಎಂ ತಮ್ಮ ಬಳಿ ಸ್ವಂತ ವಾಹನವಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಒಟ್ಟು 5.79 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾರೆ. ತಮ್ಮ ಹಿಂದೂ ಅವಿಭಜಿತ ಕುಟುಂಬದಲ್ಲಿ 1.57 ಕೋಟಿ ರೂಪಾಯಿ ಚರಾಸ್ತಿ,19.20 ಕೋಟಿ ರೂ. ಸ್ಥಿರಾಸ್ತಿ ಇದೆ ಎಂದು ತಿಳಿಸಿದ್ದಾರೆ. ಪುತ್ರಿ ಹೆಸರಲ್ಲಿ 1.28 ಕೋಟಿ ರೂಪಾಯಿ ಚರಾಸ್ತಿ, ಸಿಎಂ ಅವರ ಕೈಯಲ್ಲಿ 3 ಲಕ್ಷ ರೂಪಾಯಿ ನಗದು, ಪತ್ನಿ ಕೈಯಲ್ಲಿ 50,000 ರೂಪಾಯಿ ನಗದು, ಪುತ್ರಿ ಅದಿತಿ ಬೊಮ್ಮಾಯಿ ಕೈಯಲ್ಲಿ 25,000 ರೂ ನಗದು ಇರುವುದಾಗಿ ಮಾಹಿತಿ ನೀಡಿದ್ದಾರೆ.

ಬೊಮ್ಮಾಯಿ ಅವರ ಬಳಿ ವಿವಿಧ ಬ್ಯಾಂಕ್‌ಗಳಲ್ಲಿ 40 ಲಕ್ಷ ರೂ.ಗೂ ಹೆಚ್ಚು ಠೇವಣಿ ಇದೆ. ಪತ್ನಿ ಬಳಿ 27.6 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದಾರೆ. ವಿವಿಧ ಕಂಪನಿಗಳಲ್ಲಿ ಅವರು 3.23 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪತ್ನಿ ಚನ್ನಮ್ಮಾ ಅವರು ಸುಮಾರು 7 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪುತ್ರಿ ಹೆಸರಲ್ಲೂ 23 ಲಕ್ಷ ರೂಪಾಯಿ ಹೂಡಿಕೆ ಮಾಡಲಾಗಿದೆ. ಅವಿಭಕ್ತ ಕುಟುಂಬದಿಂದ ಬಸವರಾಜ ಬೊಮ್ಮಾಯಿ 1.42 ಕೋಟಿ ರೂಪಾಯಿ ಸಾಲವಿದೆ.

ಇನ್ನು, ಚಿನ್ನಾಭರಣ ವಿವರ ನೋಡುವುದಾದರೆ ಸಿಎಂ ಬೊಮ್ಮಾಯಿ ಬಳಿ 1.50 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಪತ್ನಿ ಬಳಿ 78.83 ಲಕ್ಷ ರೂಪಾಯಿ ಚಿನ್ನಾಭರಣ, ಪುತ್ರಿ ಬಳಿ 53.84 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಕುಟುಂಬದ ಬಳಿ 13.78 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿವೆ.

ಸ್ಥಿರಾಸ್ತಿ ವಿವರಗಳನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿ ಬಳಿ 1 ಕೃಷಿ ಜಮೀನಿದ್ದು, ಕುಟುಂಬದ ಬಳಿ ಒಂದು ಜಮೀನು ಇದೆ. ಬೆಂಗಳೂರಿನ ಯಲಹಂಕ ಹಾಗೂ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಅವರು ತಲಾ ಒಂದು ಎಕರೆ ಕೃಷಿಯೇತರ ಭೂಮಿ ಹೊಂದಿದ್ದಾರೆ. ಕುಟುಂಬದ ಹೆಸರಲ್ಲಿ ಹುಬ್ಬಳ್ಳಿಯ ನಾಲ್ಕು ಎಕರೆ ಕೃಷಿಯೇತರ ಭೂಮಿ ಇದೆ.

ಧಾರವಡದ ಇಂಡಸ್ಟ್ರಿಯಲ್‌ ಏರಿಯಾದಲ್ಲಿ, ದೊಡ್ಡಬಳ್ಳಾಪುರದಲ್ಲಿ ಹಾಗೂ ಕಾರಾವರದಲ್ಲಿ ಬೊಮ್ಮಾಯಿ ಹೆಸರಿನಲ್ಲಿ ವಾಣಿಜ್ಯ ಕಟ್ಟಡಗಳು. ಶಿಗ್ಗಾಂವಿಯಲ್ಲಿ ಅವರಿಗೆ ಮನೆಯಿದ್ದರೆ, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ಫ್ಲ್ಯಾಟ್‌, ಕುಟುಂಬದ ಹೆಸರಲ್ಲಿ ಹುಬ್ಬಳ್ಳಿಯಲ್ಲಿ ಹಾಗೂ ಬೆಂಗಳೂರಿನ ಆರ್‌ಟಿ ನಗರದಲ್ಲಿ ಮನೆ ಇದೆ. ಒಟ್ಟು ಬೊಮ್ಮಾಯಿ ಬಳಿ 22.95 ಕೋಟಿ ರೂಪಾಯಿ ಸ್ಥಿರಾಸ್ತಿ ಹಾಗೂ ಕುಟುಂಬದ ಬಳಿ 19.20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.

ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ ಪಡೆದುಕೊಂಡಿದ್ದು, ಐಸಿಐಸಿಐ ಬ್ಯಾಂಕ್‌ನಲ್ಲಿ 47.35 ಲಕ್ಷ ರೂಪಾಯಿ ಸಾಲ, ಎಸ್‌ಬಿಐನಲ್ಲಿ 37.47 ಲಕ್ಷ ರೂಪಾಯಿ ಗೃಹ ಸಾಲವಿದೆ. 79 ಸಾವಿರದ ಇನ್ನೊಂದು ಗೃಹ ಸಾಲವೂ ಎಸ್‌ಬಿಐನಲ್ಲಿದೆ. ಕುಟುಂಬದಿಂದ 1.42 ಕೋಟಿ ರೂಪಾಯಿ ಸಾಲವನ್ನು ಬೊಮ್ಮಾಯಿ ಪಡೆದುಕೊಂಡಿದ್ದಾರೆ. 9 ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದಲೂ ಅಪಾರ ಪ್ರಮಾಣದ ಸಾಲ ಪಡೆದುಕೊಂಡಿದ್ದು, ಒಟ್ಟು 5.79 ಕೋಟಿ ರೂಪಾಯಿ ಸಾಲ ಹೊಂದಿದ್ದಾರೆ.

ಇನ್ನು 2021-22ರಲ್ಲಿ 41.09 ಲಕ್ಷ ರೂಪಾಯಿ ಆದಾಯ ಗಳಿಸಿರುವುದಾಗಿ ಬೊಮ್ಮಾಯಿ ಹೇಳಿದ್ದು, ಪತ್ನಿ ಆದಾಯ 2.69 ಲಕ್ಷ ರೂಪಾಯಿ ಎಂದು ಘೋಷಿಸಿಕೊಂಡಿದ್ದಾರೆ. ವಿಶೇಷವೆಂದರೆ ತಾವಾಗಲಿ, ತಮ್ಮ ಕುಟುಂಬದವರ ಬಳಿಯಾಗಲಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

6 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

7 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

13 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

16 hours ago