Advertisement
ಸುದ್ದಿಗಳು

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

Share

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಇತ್ತೀಚೆಗೆ ಪ್ರಕಟಿಸಿರುವ ವಿದ್ಯುತ್ ದರ ಏರಿಕೆ ಹಾಗೂ ಹಿಂಬದಿ ಬಿಲ್ಲಿಂಗ್ (Back Billing) ಕ್ರಮದ ವಿರುದ್ಧ ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಅಧ್ಯಕ್ಷೆ ಉಮಾ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿ, “ಈ ನಿರ್ಧಾರವು ರಾಜ್ಯದ ಕೈಗಾರಿಕಾ ವಲಯಕ್ಕೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಗಂಭೀರ ಆಘಾತ ನೀಡಲಿದೆ” ಎಂದು ಹೇಳಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ 16 ಪೈಸೆಯಷ್ಟು ದರ ಏರಿಕೆಯಾಗಿದ್ದು, ಇದರ ಮೇಲೆ ಶೇಕಡ 9ರಷ್ಟು ವಿದ್ಯುತ್ ತೆರಿಗೆ ವಿಧಿಸಿರುವುದು ಕೈಗಾರಿಕೆಗಳ ಮೇಲಿನ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಿಸಿದೆ. ಈಗಾಗಲೇ ಉತ್ಪಾದನಾ ವೆಚ್ಚ, ಕಾರ್ಮಿಕ ವೆಚ್ಚ ಹಾಗೂ ಮಾರುಕಟ್ಟೆ ಸ್ಪರ್ಧೆಯಿಂದ ಸಂಕಷ್ಟದಲ್ಲಿರುವ MSME ವಲಯಕ್ಕೆ ಈ ನಿರ್ಧಾರ ಮತ್ತೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಉದ್ಯಮಿಗಳು ಈ ದರ ಏರಿಕೆಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗಿ, ಅಂತಿಮವಾಗಿ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ. ಇದರಿಂದ ಸ್ಪರ್ಧಾತ್ಮಕತೆ ಕಡಿಮೆಯಾಗುವ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The recent electricity tariff hike and implementation of back billing by the Karnataka Electricity Regulatory Commission have raised serious concerns among industry leaders. FKCCI President Uma Reddy warned that the decision will heavily impact small and medium enterprises (MSMEs), increasing their financial burden due to higher per-unit costs and additional electricity taxes, potentially affecting production costs and competitiveness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

4 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

4 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

12 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

19 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago