Advertisement
ಸುದ್ದಿಗಳು

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

Share

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಇತ್ತೀಚೆಗೆ ಪ್ರಕಟಿಸಿರುವ ವಿದ್ಯುತ್ ದರ ಏರಿಕೆ ಹಾಗೂ ಹಿಂಬದಿ ಬಿಲ್ಲಿಂಗ್ (Back Billing) ಕ್ರಮದ ವಿರುದ್ಧ ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಅಧ್ಯಕ್ಷೆ ಉಮಾ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿ, “ಈ ನಿರ್ಧಾರವು ರಾಜ್ಯದ ಕೈಗಾರಿಕಾ ವಲಯಕ್ಕೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಗಂಭೀರ ಆಘಾತ ನೀಡಲಿದೆ” ಎಂದು ಹೇಳಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ 16 ಪೈಸೆಯಷ್ಟು ದರ ಏರಿಕೆಯಾಗಿದ್ದು, ಇದರ ಮೇಲೆ ಶೇಕಡ 9ರಷ್ಟು ವಿದ್ಯುತ್ ತೆರಿಗೆ ವಿಧಿಸಿರುವುದು ಕೈಗಾರಿಕೆಗಳ ಮೇಲಿನ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಿಸಿದೆ. ಈಗಾಗಲೇ ಉತ್ಪಾದನಾ ವೆಚ್ಚ, ಕಾರ್ಮಿಕ ವೆಚ್ಚ ಹಾಗೂ ಮಾರುಕಟ್ಟೆ ಸ್ಪರ್ಧೆಯಿಂದ ಸಂಕಷ್ಟದಲ್ಲಿರುವ MSME ವಲಯಕ್ಕೆ ಈ ನಿರ್ಧಾರ ಮತ್ತೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಉದ್ಯಮಿಗಳು ಈ ದರ ಏರಿಕೆಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗಿ, ಅಂತಿಮವಾಗಿ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ. ಇದರಿಂದ ಸ್ಪರ್ಧಾತ್ಮಕತೆ ಕಡಿಮೆಯಾಗುವ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The recent electricity tariff hike and implementation of back billing by the Karnataka Electricity Regulatory Commission have raised serious concerns among industry leaders. FKCCI President Uma Reddy warned that the decision will heavily impact small and medium enterprises (MSMEs), increasing their financial burden due to higher per-unit costs and additional electricity taxes, potentially affecting production costs and competitiveness.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

4 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

23 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago