MIRROR FOCUS

ಬರಗಾಲದಿಂದ ತತ್ತರಿಸಿದ ಕರ್ನಾಟಕದ ರೈತರು | ಸಂಕಷ್ಟಕ್ಕೆ ಈ ವರ್ಷ 456 ರೈತರು ಆತ್ಮಹತ್ಯೆ | ಏರುತ್ತಿದೆ ನಿತ್ಯ ವಸ್ತುಗಳ ಬೆಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕವು(Karnataka) ಈ ವರ್ಷ ತೀವ್ರ ಬರಗಾಲವನ್ನು(drought ) ಎದುರಿಸುತ್ತಿದೆ. ಬೆಳೆದ ಬೆಳೆಗಳಿಗೆ ನೀರಿನ ವ್ಯವಸ್ಥೆ ಇಲ್ಲದೆ ಒಣಗಿ(yields destroyed) ಕೈಗೆ ಬಾರದಾಗಿವೆ. ಇಳುವರಿ ಇಲ್ಲದೆ ಅಸ್ತಿತ್ವವೇ ನಾಶವಾಗಿ ರೈತರು(Farmer) ತೀವ್ರ ಸಂಕಷ್ಟದಲ್ಲಿದ್ದಾರೆ. ದುರಂತವೆಂದರೆ, ಈ ವರ್ಷ ಇಲ್ಲಿಯವರೆಗೆ 456 ರೈತರು ಸಾಲದ ಹೊರೆಗೆ ಸಿಲುಕಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಬರಗಾಲ ದಾರುಣ ಪರಿಸ್ಥಿತಿಯನ್ನು ತಂದೊಡ್ಡಿದೆ.

Advertisement
Advertisement

ಹಾವೇರಿ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರದ ಅಂಕಿಅಂಶಗಳು ಕೃಷಿಯಿಂದ ಹತಾಶೆಗೊಂಡಿರುವ ರೈತರ ಭಯಾನಕ ಕಥೆಯನ್ನು ಬಹಿರಂಗಪಡಿಸುತ್ತವೆ. ಹಿಂದಿನ ವರ್ಷದಲ್ಲಿ (ಏಪ್ರಿಲ್ 1, 2022, ಮಾರ್ಚ್ 31, 2023), 968 ರೈತರು ತಮ್ಮ ಜೀವನವನ್ನು ಕೊನೆಗೊಳಿಸಿದ್ದು, ಈ ಬಾರಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಈ ಪೈಕಿ 849 ಪ್ರಕರಣಗಳನ್ನು ಪರಿಹಾರಕ್ಕೆ ಅರ್ಹವೆಂದು ಪರಿಗಣಿಸಲಾಗಿದೆ. ಸರ್ಕಾರದ ಪ್ರಕಾರ 2022-23ರ ಅವಧಿಯಲ್ಲಿ 849 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿದೆ. ಈ ಅವಧಿಯಲ್ಲಿ ಒಟ್ಟು 354 ಪ್ರಕರಣಗಳಲ್ಲಿ 321 ಅರ್ಹ ಪ್ರಕರಣಗಳಿಗೆ ಉಪವಿಭಾಗಾಧಿಕಾರಿಗಳ ಸಮಿತಿ ಪರಿಹಾರ ನೀಡಿದೆ.

ಆತಂಕಕಾರಿ ವಿಷಯವೆಂದರೆ ಶಿವಮೊಗ್ಗ, ಧಾರವಾಡ, ಹಾವೇರಿ, ಬೆಳಗಾವಿ, ಬೀದರ್, ಚಿಕ್ಕಮಗಳೂರು, ಕಲಬುರಗಿ, ಮೈಸೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ವರ್ಷದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಸಾವನ್ನಪ್ಪಿದ್ದಾರೆ. ಆದಾಗ್ಯೂ, ಚಾಮರಾಜನಗರ, ಕೊಡಗು, ಕೋಲಾರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಮತ್ತು ಉಡುಪಿ ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಿಗೆ ಹೋಲಿಸಿದ್ರೆ ಕಡಿಮೆ ಪ್ರಕರಣಗಳಿವೆ. ದಕ್ಷಿಣ ಕನ್ನಡದಲ್ಲಿ ಮೂರು ರೈತರ ಸಾವುಗಳು ವರದಿಯಾಗಿದ್ದು, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ರಾಮನಗರದಲ್ಲಿ ಯಾವುದೇ ವರದಿಯಾಗಿಲ್ಲ. ಚಾಮರಾಜನಗರ ಮತ್ತು ಕೋಲಾರದಲ್ಲಿ ಕ್ರಮವಾಗಿ ಎರಡು ಮತ್ತು ಮೂರು ಸಾವುಗಳು ವರದಿಯಾಗಿವೆ.

ಕಾಡುತ್ತಿರುವ ಮಳೆಯ ಕೊರತೆ : ಈ ಬಾರಿ ಮುಂಗಾಋಉ ಕೈಕೊಟ್ಟಿರುವ ಹಿನ್ನೆಲೆ ಈ ಬಾರಿಗೆ ಭೀಕರ ಬರಗಾಲವು ರೈತರ ಬೆಳೆಗಳಿಗೆ ಅಡ್ಡಿಪಡಿಸಿದೆ. ಈ ಬಾರಿ ಭಾರಿ ಮಳೆಯ ಕೊರತೆಯನ್ನು ಉಂಟುಮಾಡಿದೆ. ಕಳೆದ ವರ್ಷ ರಾಜ್ಯದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸರಾಸರಿ 839 ಮಿ.ಮೀ ಮಳೆಯಾಗುವ ಬದಲು ಸರಾಸರಿ 633 ಮಿ.ಮೀ. ಅಕ್ಟೋಬರ್‌ನಿಂದ ಡಿಸೆಂಬರ್ ಮಧ್ಯದವರೆಗೆ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿ 188 ಮಿಮೀ ಮಳೆಯ ವಿರುದ್ಧ ಕೇವಲ 113 ಮಿಮೀ ಮಳೆಯನ್ನು ದಾಖಲಿಸಿದೆ. ಪ್ರಸ್ತುತ 31 ಜಿಲ್ಲೆಗಳಲ್ಲಿ 24 ಜಿಲ್ಲೆಗಳಲ್ಲಿ ಮಳೆಯ ಕೊರತೆ ಬಂದಿದೆ. ಇದು ಕೃಷಿ ಬಿಕ್ಕಟ್ಟನ್ನು ಉಲ್ಬಣಗೊಳಿಸುತ್ತಿದೆ. ಕೃಷಿ ಇಲಾಖೆಯ ಪ್ರಕಾರ, ಈ ವರ್ಷ ನಿರೀಕ್ಷಿತ 148 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಬೆಳೆ ಬರದಿಂದಾಗಿ 60 ಲಕ್ಷ ಮೆಟ್ರಿಕ್ ಟನ್‌ಗಳಿಗೆ ಭಾರಿ ಕುಸಿತವನ್ನು ಕಾಣಬಹುದು. ರಾಜ್ಯದ ಹಲವಾರು ಭಾಗಗಳಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿವೆ, ಇದು ಬೆಳೆ ಒಣಗಳು ಹಾಗೂ ಕಡಿಮೆ ಇಳುವರಿಯನ್ನು ಹೊಂದಲು ಕಾರಣವಾಗಿದೆ.

ಬೆಲೆಗಳು ಗಗನಕ್ಕೇರುತ್ತಿದೆ:  ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಪ್ರತಿ ಕ್ವಿಂಟಲ್‌ಗೆ 7,000 ರೂ.ಗೆ ಮಾರಾಟವಾಗುತ್ತಿದ್ದ ಕಾಳು ಬೇಳೆ ಈಗ 12,000 ರೂ.ಗೆ ತಲುಪಿದೆ. ಬೇಳೆಕಾಳು ಬೆಲೆ ಕೆ.ಜಿ.ಗೆ 70 ರಿಂದ 120 ರೂ.ಗೆ ಏರುವ ಮೂಲಕ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತರ ಪ್ರಮುಖ ವಸ್ತುಗಳು ಸಹ ಬೆಲೆ ಏರಿಕೆಗೆ ಸಾಕ್ಷಿಯಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಯಾಸಟ್ ಡಾಟ್ ಕಾಮ್‌ನೊಂದಿಗೆ ಮಾತನಾಡಿದ ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ, ಅಕ್ಕಿ ಮತ್ತು ಬೇಳೆಕಾಳುಗಳಲ್ಲಿ ಶೇಕಡಾ 30 ರಿಂದ 40 ರಷ್ಟು ಬೆಲೆ ವ್ಯತ್ಯಾಸದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಹೊಸ ಬೆಳೆಗಳು ಮಾರುಕಟ್ಟೆಗೆ ಬರುವವರೆಗೂ ಬೆಲೆ ಏರಿಕೆ ಮುಂದುವರಿಯುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಆಹಾರದ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯನ್ನು ಲಹೋಟಿ ಹೇಳಿದ್ದಾರೆ. ಈ ಸಂಪೂರ್ಣ ಬಿಕ್ಕಟ್ಟಿಗೆ ಈಗ ಇರುವ ಬರಗಾಲವೇ ಕಾರಣ, ಅಲ್ಲದೆ ಮುಂದಿನ ವರ್ಷದ ಮಳೆಯಾಗುವವರೆಗೆ ಬೇರೆ ಯಾವುದೇ ಆಯ್ಕೆಯಿಲ್ಲ ಎಂದರು

Advertisement

ಸುದ್ದಿಮೂಲ : ಪ್ರಜಾವಾಣಿ

Karnataka is grappling with an acute drought this year, leaving crops unviable, existing yields destroyed, and farmers in severe distress. Tragically, the dire situation has led 456 farmers, burdened by the weight of debt, to end their lives this year so far.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

4 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

5 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

10 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

13 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

13 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

13 hours ago