ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಪ್ರದರ್ಶಿಸಲು ಪ್ರವಾಸೋದ್ಯಮ ಇಲಾಖೆಯು ಮುಂದಾಗಿದೆ. ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಸಿದ್ಧ ಹಾಗೂ ಕಡಿಮೆ ಪ್ರಸಿದ್ಧ ಸ್ಥಳಗಳ ವಿವರಗಳನ್ನು ಹಂಚಿಕೊಳ್ಳಲು ಜನರನ್ನು ಕೇಳುತ್ತಿದೆ.
ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿ ಕೋರಿದದ್ದಾರೆ. ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವವನ್ನು ಕೋರಲಾಗುತ್ತಿದ್ದು, ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಲಾಗುವ ಮಾಹಿತಿಯನ್ನು ಜನರು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮ ದಿನದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಇಲಾಖೆಯು ಮಂಗಳವಾರ ಆಯೋಜಿಸಿದ್ದ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ’ ಕುರಿತು ವೆಬ್ನಾರಿನಲ್ಲಿ ವಿವಿ ನಿವೃತ್ತ ಪ್ರಾಧ್ಯಪಕರು ಹಾಗೂ ಇತಿಹಾಸ ತಜ್ಞರು ಪಾಲ್ಗೊಂಡಿದ್ದರು.
ಇಲಾಖೆಯು ಕರ್ನಾಟಕದಲ್ಲಿ 770 ಪ್ರವಾಸೋದ್ಯಮ ತಾಣಗಳನ್ನು ಪಟ್ಟಿ ಮಾಡಿದೆ, ಅದರಲ್ಲಿ 25 ಕಡಿಮೆ ಪ್ರಸಿದ್ಧ ಸ್ಥಳಗಳು ಎಂದು ಗುರುತು ಮಾಡಲಾಗಿದೆ. ಸಿದ್ಧಪಡಿಸಲಾಗುತ್ತಿರುವ ಕರಪತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಭಾಗವಾಗಿರುವುದನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.