ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಪ್ರದರ್ಶಿಸಲು ಪ್ರವಾಸೋದ್ಯಮ ಇಲಾಖೆಯು ಮುಂದಾಗಿದೆ. ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಸಿದ್ಧ ಹಾಗೂ ಕಡಿಮೆ ಪ್ರಸಿದ್ಧ ಸ್ಥಳಗಳ ವಿವರಗಳನ್ನು ಹಂಚಿಕೊಳ್ಳಲು ಜನರನ್ನು ಕೇಳುತ್ತಿದೆ.
ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿ ಕೋರಿದದ್ದಾರೆ. ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವವನ್ನು ಕೋರಲಾಗುತ್ತಿದ್ದು, ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಲಾಗುವ ಮಾಹಿತಿಯನ್ನು ಜನರು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮ ದಿನದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಇಲಾಖೆಯು ಮಂಗಳವಾರ ಆಯೋಜಿಸಿದ್ದ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ’ ಕುರಿತು ವೆಬ್ನಾರಿನಲ್ಲಿ ವಿವಿ ನಿವೃತ್ತ ಪ್ರಾಧ್ಯಪಕರು ಹಾಗೂ ಇತಿಹಾಸ ತಜ್ಞರು ಪಾಲ್ಗೊಂಡಿದ್ದರು.
ಇಲಾಖೆಯು ಕರ್ನಾಟಕದಲ್ಲಿ 770 ಪ್ರವಾಸೋದ್ಯಮ ತಾಣಗಳನ್ನು ಪಟ್ಟಿ ಮಾಡಿದೆ, ಅದರಲ್ಲಿ 25 ಕಡಿಮೆ ಪ್ರಸಿದ್ಧ ಸ್ಥಳಗಳು ಎಂದು ಗುರುತು ಮಾಡಲಾಗಿದೆ. ಸಿದ್ಧಪಡಿಸಲಾಗುತ್ತಿರುವ ಕರಪತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಭಾಗವಾಗಿರುವುದನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…