Advertisement
MIRROR FOCUS

ಕರ್ನಾಟಕದ ಜಿಐ ಉತ್ಪನ್ನಗಳ ರಫ್ತು | APEDAಗೆ ಪಿಯೂಷ್ ಗೋಯಲ್ ಶ್ಲಾಘನೆ

Share

ಭಾರತದ ಕೃಷಿ ರಫ್ತುಗಳನ್ನು ಬಲಪಡಿಸುವ ದಿಸೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕರ್ನಾಟಕದ ಮೂರು ಜಿಐ (Geographical Indication) ಟ್ಯಾಗ್ ಹೊಂದಿದ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು ಮಾಡಲಾಗಿದೆ.

ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.  ಅವರು, “APEDA ಭಾರತದ ಕೃಷಿ ರಫ್ತುಗಳನ್ನು ನಿರಂತರವಾಗಿ ಬಲಪಡಿಸುತ್ತಿದೆ. ಈ ನಿಟ್ಟಿನಲ್ಲಿ, ಕರ್ನಾಟಕದ ಮೂರು ಜಿಐ-ಟ್ಯಾಗ್ ಉತ್ಪನ್ನಗಳು — ನಂಜನಗೂಡು ರಸಬಾಳೆ ಬಾಳೆಹಣ್ಣು, ಮೈಸೂರು ವೀಳ್ಯದ ಎಲೆಗಳು ಮತ್ತು ಇಂಡಿ ನಿಂಬೆ — ಮಾಲ್ಡೀವ್ಸ್‌ಗೆ ವಿಮಾನದ ಮೂಲಕ ರಫ್ತು ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

Advertisement

ಸಚಿವರು ತಮ್ಮ ಪೋಸ್ಟ್‌ನಲ್ಲಿ ಮುಂದುವರಿಸಿ,  “ಈ ಉಪಕ್ರಮವು ಭಾರತದ ಕೃಷಿ ರಫ್ತುಗಳನ್ನು ಹೆಚ್ಚಿಸುವುದು, ರೈತರಿಗೆ ಬೆಂಬಲ ಒದಗಿಸುವುದು, ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶ ವಿಸ್ತರಿಸುವುದು ಮತ್ತು ಭಾರತದ ಶ್ರೀಮಂತ ಜಿಐ ಪರಂಪರೆಯನ್ನು ಜಾಗತಿಕವಾಗಿ ಉತ್ತೇಜಿಸುವ APEDAಯ ನಿರಂತರ ಪ್ರಯತ್ನಗಳ ಪ್ರತಿಬಿಂಬವಾಗಿದೆ” ಎಂದು ಹೇಳಿದ್ದಾರೆ.

ಈ ರಫ್ತು ಪ್ರಕ್ರಿಯೆ ಕರ್ನಾಟಕದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಅವಕಾಶಗಳನ್ನು ತೆರೆದಿದ್ದು, ಜಿಐ ಟ್ಯಾಗ್ ಪಡೆದ ಬೆಳೆಗಳಿಗೆ ಹೆಚ್ಚುವರಿ ಮೌಲ್ಯ ಸಿಗುವ ನಿರೀಕ್ಷೆ ಮೂಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ಫೋಟೋ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್
ಮೂಲ: ಎಕ್ಸ್ (X)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

24 minutes ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

2 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

3 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

8 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago