ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

March 2, 2023
3:20 PM

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಅಡಿಕೆಯು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರಾಜ್ಯದ ಸುಮಾರು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸಿದೆ. ಇದೀಗ ಅಡಿಕೆ ಹಳದಿ ಎಲೆರೋಗವು ವ್ಯಾಪಿಸುತ್ತಿದ್ದು ಬೆಳೆಗೆ ಹಾನಿಯನ್ನುಂಟುಮಾಡಿದೆ. ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ  ಸಸ್ಯ ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆ ಮತ್ತು ಪರಿಣಾಮಕಾರಿ ಕ್ರಮಗಳ ತುರ್ತು ಅಗತ್ಯ ಅನಿವಾರ್ಯವಾಗಿದೆ.  ರಾಜ್ಯದಲ್ಲಿ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವಾಲಯ ರಚಿಸಿರುವ ತಜ್ಞರ ಸಮಿತಿ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಆಳವಾದ ಸಂಶೋಧನೆ ಅಗತ್ಯ ಎಂದು ಸಲಹೆ ನೀಡಿದೆ.

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ.  ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ  ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.

ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು  ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror