ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

March 2, 2023
3:20 PM

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಅಡಿಕೆಯು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರಾಜ್ಯದ ಸುಮಾರು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸಿದೆ. ಇದೀಗ ಅಡಿಕೆ ಹಳದಿ ಎಲೆರೋಗವು ವ್ಯಾಪಿಸುತ್ತಿದ್ದು ಬೆಳೆಗೆ ಹಾನಿಯನ್ನುಂಟುಮಾಡಿದೆ. ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ  ಸಸ್ಯ ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆ ಮತ್ತು ಪರಿಣಾಮಕಾರಿ ಕ್ರಮಗಳ ತುರ್ತು ಅಗತ್ಯ ಅನಿವಾರ್ಯವಾಗಿದೆ.  ರಾಜ್ಯದಲ್ಲಿ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವಾಲಯ ರಚಿಸಿರುವ ತಜ್ಞರ ಸಮಿತಿ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಆಳವಾದ ಸಂಶೋಧನೆ ಅಗತ್ಯ ಎಂದು ಸಲಹೆ ನೀಡಿದೆ.

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ.  ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ  ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.

ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು  ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror