Advertisement
MIRROR FOCUS

ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

Share

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಅಡಿಕೆಯು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರಾಜ್ಯದ ಸುಮಾರು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸಿದೆ. ಇದೀಗ ಅಡಿಕೆ ಹಳದಿ ಎಲೆರೋಗವು ವ್ಯಾಪಿಸುತ್ತಿದ್ದು ಬೆಳೆಗೆ ಹಾನಿಯನ್ನುಂಟುಮಾಡಿದೆ. ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ  ಸಸ್ಯ ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆ ಮತ್ತು ಪರಿಣಾಮಕಾರಿ ಕ್ರಮಗಳ ತುರ್ತು ಅಗತ್ಯ ಅನಿವಾರ್ಯವಾಗಿದೆ.  ರಾಜ್ಯದಲ್ಲಿ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವಾಲಯ ರಚಿಸಿರುವ ತಜ್ಞರ ಸಮಿತಿ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಆಳವಾದ ಸಂಶೋಧನೆ ಅಗತ್ಯ ಎಂದು ಸಲಹೆ ನೀಡಿದೆ.

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ.  ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ  ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.

ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು  ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

23 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago