Advertisement
MIRROR FOCUS

ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

Share

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಅಡಿಕೆಯು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರಾಜ್ಯದ ಸುಮಾರು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸಿದೆ. ಇದೀಗ ಅಡಿಕೆ ಹಳದಿ ಎಲೆರೋಗವು ವ್ಯಾಪಿಸುತ್ತಿದ್ದು ಬೆಳೆಗೆ ಹಾನಿಯನ್ನುಂಟುಮಾಡಿದೆ. ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ  ಸಸ್ಯ ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆ ಮತ್ತು ಪರಿಣಾಮಕಾರಿ ಕ್ರಮಗಳ ತುರ್ತು ಅಗತ್ಯ ಅನಿವಾರ್ಯವಾಗಿದೆ.  ರಾಜ್ಯದಲ್ಲಿ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವಾಲಯ ರಚಿಸಿರುವ ತಜ್ಞರ ಸಮಿತಿ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಆಳವಾದ ಸಂಶೋಧನೆ ಅಗತ್ಯ ಎಂದು ಸಲಹೆ ನೀಡಿದೆ.

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ.  ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ  ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.

ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು  ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 hour ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

8 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

9 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

9 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

19 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

19 hours ago