ಅಂತರ್ಜಲ ವಿನಿಮಯ, ನಿಯಂತ್ರಣ ತಿದ್ದುಪಡಿ ವಿಧೇಯಕ | ವಿಧಾನಪರಿಷತ್ ನಲ್ಲಿ ಅಂಗೀಕಾರ | ಬೋರ್ ವೆಲ್ ಕೊರೆಯಲು ಇನ್ನು ಅನುಮತಿ ಬೇಕು |

August 21, 2025
9:58 PM

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಪರಿಷತ್ ನಲ್ಲಿಂದು ಅಂಗೀಕಾರಗೊಂಡಿತು.

ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬೋಸರಾಜ್ ೧೫ ರಾಜ್ಯಗಳು ಈಗಾಗಲೇ ಈ ಕಾಯ್ದೆ ಅನುಷ್ಠಾನಗೊಳಿಸಿವೆ. ಅಂತರ್ಜಲ ಅಭಿವೃದ್ಧಿಗೆ ಈ ವಿಧೇಯಕ ಸಹಕಾರಯಾಗಲಿದೆ.  ಬೋರ್ ವೆಲ್ ಕೊರೆಯಲು ಅನುಮತಿ  ಪಡೆಯುವುದು  ಈ ವಿಧೇಯಕದ ಪ್ರಮುಖ ಅಂಶವಾಗಿದೆ ಎಂದರು. ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್,ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರಿನ ಬಳಕೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸದಸ್ಯ ರವಿಕುಮಾರ್ ಅವರು ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು. ‘ನೀರೇ ಭವಿಷ್ಯ’ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ‌ ಅಂಗೀಕರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror