Advertisement
MIRROR FOCUS

ಅಂತರ್ಜಲ ವಿನಿಮಯ, ನಿಯಂತ್ರಣ ತಿದ್ದುಪಡಿ ವಿಧೇಯಕ | ವಿಧಾನಪರಿಷತ್ ನಲ್ಲಿ ಅಂಗೀಕಾರ | ಬೋರ್ ವೆಲ್ ಕೊರೆಯಲು ಇನ್ನು ಅನುಮತಿ ಬೇಕು |

Share

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಪರಿಷತ್ ನಲ್ಲಿಂದು ಅಂಗೀಕಾರಗೊಂಡಿತು.

ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬೋಸರಾಜ್ ೧೫ ರಾಜ್ಯಗಳು ಈಗಾಗಲೇ ಈ ಕಾಯ್ದೆ ಅನುಷ್ಠಾನಗೊಳಿಸಿವೆ. ಅಂತರ್ಜಲ ಅಭಿವೃದ್ಧಿಗೆ ಈ ವಿಧೇಯಕ ಸಹಕಾರಯಾಗಲಿದೆ.  ಬೋರ್ ವೆಲ್ ಕೊರೆಯಲು ಅನುಮತಿ  ಪಡೆಯುವುದು  ಈ ವಿಧೇಯಕದ ಪ್ರಮುಖ ಅಂಶವಾಗಿದೆ ಎಂದರು. ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್,ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರಿನ ಬಳಕೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸದಸ್ಯ ರವಿಕುಮಾರ್ ಅವರು ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು. ‘ನೀರೇ ಭವಿಷ್ಯ’ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ‌ ಅಂಗೀಕರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

20 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago