ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಪರಿಷತ್ ನಲ್ಲಿಂದು ಅಂಗೀಕಾರಗೊಂಡಿತು.
ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬೋಸರಾಜ್ ೧೫ ರಾಜ್ಯಗಳು ಈಗಾಗಲೇ ಈ ಕಾಯ್ದೆ ಅನುಷ್ಠಾನಗೊಳಿಸಿವೆ. ಅಂತರ್ಜಲ ಅಭಿವೃದ್ಧಿಗೆ ಈ ವಿಧೇಯಕ ಸಹಕಾರಯಾಗಲಿದೆ. ಬೋರ್ ವೆಲ್ ಕೊರೆಯಲು ಅನುಮತಿ ಪಡೆಯುವುದು ಈ ವಿಧೇಯಕದ ಪ್ರಮುಖ ಅಂಶವಾಗಿದೆ ಎಂದರು. ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್,ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರಿನ ಬಳಕೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸದಸ್ಯ ರವಿಕುಮಾರ್ ಅವರು ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು. ‘ನೀರೇ ಭವಿಷ್ಯ’ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…