ಚಾಮರಾಜನಗರದಲ್ಲಿ ಒಂದು ತಾಸಿಗೂ ಅಧಿಕ ಕಾಲ ಮಳೆಯಾಗಿದ್ದು, ಕಳೆದ ಕೆಲವು ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಇಳೆ ತಂಪು ದೊರಕಿದೆ. ಆದರೆ, ಭಾರೀ ಆಲಿಕಲ್ಲು ಮಳೆಯಿಂದಾಗಿ ರೈತರು ಕಂಗಾಲಾಗಿರುವ ಘಟನೆ ವರದಿಯಾಗಿದೆ.
ಚಾಮರಾಜನಗರ ತಾಲೂಕಿನ ಉಡಿಗಾಲ, ನಂಜೇದೇವನಪುರ, ಮರಿಯಾಲ ಹಾಗೂ ಉತ್ತುವಳ್ಳಿ ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಜಮೀನಿನ ತುಂಬೆಲ್ಲಾ ಆಲಿಕಲ್ಲುಗಳು ಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಜನವಸತಿ ಪ್ರದೇಶಗಳಲ್ಲಿಯೂ ಆಲಿಕಲ್ಲು ಸುರಿದ ಕಾರಣ ಸ್ಥಳೀಯರು ಆತಂಕಗೊಂಡಿದ್ದಾರೆ.
ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿಯೂ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾದ ವರದಿಗಳು ಲಭ್ಯವಾಗುತ್ತಿವೆ.
ಇನ್ನು ರಾಜಧಾನಿ ಬೆಂಗಳೂರು ನಗರದ ಹಲವೆಡೆ ತುಂತುರು ಮಳೆಯಾದ ಮಾಹಿತಿ ದೊರೆತಿದ್ದು, ಬಿಸಿಲಿನ ತಾಪಮಾನದಿಂದ ಕೆಲಮಟ್ಟಿಗೆ ಶಮನವಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.
ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸುವ ಸಾಧ್ಯತೆ ಇದ್ದು, ಕೃಷಿ ಇಲಾಖೆ ಹಾನಿ ಅಂದಾಜು ಕಾರ್ಯ ಆರಂಭಿಸುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Heavy hailstorms lashed parts of Chamarajanagar and Belagavi districts, bringing relief from intense heat but causing concern among farmers due to possible crop damage. Meanwhile, light drizzle was reported in several areas of Bengaluru, offering temporary respite from rising temperatures.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…