Advertisement
ಸುದ್ದಿಗಳು

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

Share

ಚಾಮರಾಜನಗರದಲ್ಲಿ ಒಂದು ತಾಸಿಗೂ ಅಧಿಕ ಕಾಲ ಮಳೆಯಾಗಿದ್ದು, ಕಳೆದ ಕೆಲವು ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಇಳೆ ತಂಪು ದೊರಕಿದೆ. ಆದರೆ, ಭಾರೀ ಆಲಿಕಲ್ಲು ಮಳೆಯಿಂದಾಗಿ ರೈತರು ಕಂಗಾಲಾಗಿರುವ ಘಟನೆ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಉಡಿಗಾಲ, ನಂಜೇದೇವನಪುರ, ಮರಿಯಾಲ ಹಾಗೂ ಉತ್ತುವಳ್ಳಿ ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಜಮೀನಿನ ತುಂಬೆಲ್ಲಾ ಆಲಿಕಲ್ಲುಗಳು ಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಜನವಸತಿ ಪ್ರದೇಶಗಳಲ್ಲಿಯೂ ಆಲಿಕಲ್ಲು ಸುರಿದ ಕಾರಣ ಸ್ಥಳೀಯರು ಆತಂಕಗೊಂಡಿದ್ದಾರೆ.

ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿಯೂ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾದ ವರದಿಗಳು ಲಭ್ಯವಾಗುತ್ತಿವೆ.

ಇನ್ನು ರಾಜಧಾನಿ ಬೆಂಗಳೂರು ನಗರದ ಹಲವೆಡೆ ತುಂತುರು ಮಳೆಯಾದ ಮಾಹಿತಿ ದೊರೆತಿದ್ದು, ಬಿಸಿಲಿನ ತಾಪಮಾನದಿಂದ ಕೆಲಮಟ್ಟಿಗೆ ಶಮನವಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸುವ ಸಾಧ್ಯತೆ ಇದ್ದು, ಕೃಷಿ ಇಲಾಖೆ ಹಾನಿ ಅಂದಾಜು ಕಾರ್ಯ ಆರಂಭಿಸುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Heavy hailstorms lashed parts of Chamarajanagar and Belagavi districts, bringing relief from intense heat but causing concern among farmers due to possible crop damage. Meanwhile, light drizzle was reported in several areas of Bengaluru, offering temporary respite from rising temperatures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

5 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

10 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

11 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

22 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

22 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago