Advertisement
ಸುದ್ದಿಗಳು

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

Share

ಚಾಮರಾಜನಗರದಲ್ಲಿ ಒಂದು ತಾಸಿಗೂ ಅಧಿಕ ಕಾಲ ಮಳೆಯಾಗಿದ್ದು, ಕಳೆದ ಕೆಲವು ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಇಳೆ ತಂಪು ದೊರಕಿದೆ. ಆದರೆ, ಭಾರೀ ಆಲಿಕಲ್ಲು ಮಳೆಯಿಂದಾಗಿ ರೈತರು ಕಂಗಾಲಾಗಿರುವ ಘಟನೆ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಉಡಿಗಾಲ, ನಂಜೇದೇವನಪುರ, ಮರಿಯಾಲ ಹಾಗೂ ಉತ್ತುವಳ್ಳಿ ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಜಮೀನಿನ ತುಂಬೆಲ್ಲಾ ಆಲಿಕಲ್ಲುಗಳು ಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಜನವಸತಿ ಪ್ರದೇಶಗಳಲ್ಲಿಯೂ ಆಲಿಕಲ್ಲು ಸುರಿದ ಕಾರಣ ಸ್ಥಳೀಯರು ಆತಂಕಗೊಂಡಿದ್ದಾರೆ.

ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿಯೂ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾದ ವರದಿಗಳು ಲಭ್ಯವಾಗುತ್ತಿವೆ.

ಇನ್ನು ರಾಜಧಾನಿ ಬೆಂಗಳೂರು ನಗರದ ಹಲವೆಡೆ ತುಂತುರು ಮಳೆಯಾದ ಮಾಹಿತಿ ದೊರೆತಿದ್ದು, ಬಿಸಿಲಿನ ತಾಪಮಾನದಿಂದ ಕೆಲಮಟ್ಟಿಗೆ ಶಮನವಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸುವ ಸಾಧ್ಯತೆ ಇದ್ದು, ಕೃಷಿ ಇಲಾಖೆ ಹಾನಿ ಅಂದಾಜು ಕಾರ್ಯ ಆರಂಭಿಸುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Heavy hailstorms lashed parts of Chamarajanagar and Belagavi districts, bringing relief from intense heat but causing concern among farmers due to possible crop damage. Meanwhile, light drizzle was reported in several areas of Bengaluru, offering temporary respite from rising temperatures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

6 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

6 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

15 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

19 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

20 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

20 hours ago