ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

January 16, 2026
6:41 AM
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ.

2025ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಖಾತರಿ ದೊರಕಿದ್ದು, ಇದರ ಪೈಕಿ ಕಳೆದ ಡಿಸೆಂಬರ್ ವೇಳೆಗೆ ₹4.71 ಲಕ್ಷ ಕೋಟಿ ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಜನವರಿ 19ರಿಂದ 23ರವರೆಗೆ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಹೂಡಿಕೆ ಒಡಂಬಡಿಕೆಗಳ ಪೈಕಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿದೆ ಎಂದು ಹೇಳಿದರು.

ತಯಾರಿಕಾ ಮತ್ತು ಇಂಧನ ವಲಯದಲ್ಲಿ ಮಹತ್ವದ ಪ್ರಗತಿ : ಸಚಿವರ ಮಾಹಿತಿ ಪ್ರಕಾರ,

  • ತಯಾರಿಕಾ ವಲಯದಲ್ಲಿ ₹5.66 ಲಕ್ಷ ಕೋಟಿ ಹೂಡಿಕೆ ಖಾತರಿಗಳ ಪೈಕಿ ₹3.22 ಲಕ್ಷ ಕೋಟಿ ಈಗಾಗಲೇ ನೈಜ ಬಂಡವಾಳವಾಗಿ ಹರಿದು ಬಂದಿದೆ.

  • ಮರುಬಳಕೆ ಇಂಧನ (Renewable Energy) ವಲಯದಲ್ಲಿ ₹4.25 ಲಕ್ಷ ಕೋಟಿ ಖಾತರಿಗಳ ಪೈಕಿ ₹1.41 ಲಕ್ಷ ಕೋಟಿ ಹೂಡಿಕೆಯಾಗಿ ಸಾಕಾರಗೊಂಡಿದೆ.

    Advertisement

ಪ್ರಮುಖ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿರುವ ಕೆಲವು ಪ್ರಮುಖ ಕೈಗಾರಿಕಾ ಹೂಡಿಕೆಗಳ ಕುರಿತು ಸಚಿವರು ಮಾಹಿತಿ ನೀಡಿದ್ದು,

  • ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಸ್ಥಾಪನೆಗೆ ₹9,300 ಕೋಟಿ

  • ಎಂವಿ ಎನರ್ಜಿ ಕಂಪನಿಯಿಂದ ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಹಾಗೂ ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ ₹5,495 ಕೋಟಿ

  • ಜಿಂದಾಲ್ ಸ್ಟೀಲ್ಸ್ ಸಂಸ್ಥೆಯಿಂದ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ ₹7,000 ಕೋಟಿ

ಹೂಡಿಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

Advertisement

ಈ ಹೂಡಿಕೆಗಳು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವ ಜೊತೆಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌
January 16, 2026
7:01 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು
January 16, 2026
6:52 AM
by: ದ ರೂರಲ್ ಮಿರರ್.ಕಾಂ
ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ : ಬಳ್ಳಾರಿ ರೈತರಿಗೆ ನೋಂದಣಿ ಕರೆ
January 16, 2026
6:44 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಜಿಐ ಉತ್ಪನ್ನಗಳ ರಫ್ತು | APEDAಗೆ ಪಿಯೂಷ್ ಗೋಯಲ್ ಶ್ಲಾಘನೆ
January 16, 2026
6:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror