Advertisement
ಸುದ್ದಿಗಳು

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

Share

2025ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಖಾತರಿ ದೊರಕಿದ್ದು, ಇದರ ಪೈಕಿ ಕಳೆದ ಡಿಸೆಂಬರ್ ವೇಳೆಗೆ ₹4.71 ಲಕ್ಷ ಕೋಟಿ ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Advertisement

ಜನವರಿ 19ರಿಂದ 23ರವರೆಗೆ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಹೂಡಿಕೆ ಒಡಂಬಡಿಕೆಗಳ ಪೈಕಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿದೆ ಎಂದು ಹೇಳಿದರು.

ತಯಾರಿಕಾ ಮತ್ತು ಇಂಧನ ವಲಯದಲ್ಲಿ ಮಹತ್ವದ ಪ್ರಗತಿ : ಸಚಿವರ ಮಾಹಿತಿ ಪ್ರಕಾರ,

  • ತಯಾರಿಕಾ ವಲಯದಲ್ಲಿ ₹5.66 ಲಕ್ಷ ಕೋಟಿ ಹೂಡಿಕೆ ಖಾತರಿಗಳ ಪೈಕಿ ₹3.22 ಲಕ್ಷ ಕೋಟಿ ಈಗಾಗಲೇ ನೈಜ ಬಂಡವಾಳವಾಗಿ ಹರಿದು ಬಂದಿದೆ.

  • ಮರುಬಳಕೆ ಇಂಧನ (Renewable Energy) ವಲಯದಲ್ಲಿ ₹4.25 ಲಕ್ಷ ಕೋಟಿ ಖಾತರಿಗಳ ಪೈಕಿ ₹1.41 ಲಕ್ಷ ಕೋಟಿ ಹೂಡಿಕೆಯಾಗಿ ಸಾಕಾರಗೊಂಡಿದೆ.

ಪ್ರಮುಖ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿರುವ ಕೆಲವು ಪ್ರಮುಖ ಕೈಗಾರಿಕಾ ಹೂಡಿಕೆಗಳ ಕುರಿತು ಸಚಿವರು ಮಾಹಿತಿ ನೀಡಿದ್ದು,

  • ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಸ್ಥಾಪನೆಗೆ ₹9,300 ಕೋಟಿ

  • ಎಂವಿ ಎನರ್ಜಿ ಕಂಪನಿಯಿಂದ ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಹಾಗೂ ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ ₹5,495 ಕೋಟಿ

  • ಜಿಂದಾಲ್ ಸ್ಟೀಲ್ಸ್ ಸಂಸ್ಥೆಯಿಂದ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ ₹7,000 ಕೋಟಿ

ಹೂಡಿಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆಗಳು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವ ಜೊತೆಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

5 minutes ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

8 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

13 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

14 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

14 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

22 hours ago