Advertisement
ಸುದ್ದಿಗಳು

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

Share

2025ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಖಾತರಿ ದೊರಕಿದ್ದು, ಇದರ ಪೈಕಿ ಕಳೆದ ಡಿಸೆಂಬರ್ ವೇಳೆಗೆ ₹4.71 ಲಕ್ಷ ಕೋಟಿ ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಜನವರಿ 19ರಿಂದ 23ರವರೆಗೆ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಹೂಡಿಕೆ ಒಡಂಬಡಿಕೆಗಳ ಪೈಕಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿದೆ ಎಂದು ಹೇಳಿದರು.

ತಯಾರಿಕಾ ಮತ್ತು ಇಂಧನ ವಲಯದಲ್ಲಿ ಮಹತ್ವದ ಪ್ರಗತಿ : ಸಚಿವರ ಮಾಹಿತಿ ಪ್ರಕಾರ,

  • ತಯಾರಿಕಾ ವಲಯದಲ್ಲಿ ₹5.66 ಲಕ್ಷ ಕೋಟಿ ಹೂಡಿಕೆ ಖಾತರಿಗಳ ಪೈಕಿ ₹3.22 ಲಕ್ಷ ಕೋಟಿ ಈಗಾಗಲೇ ನೈಜ ಬಂಡವಾಳವಾಗಿ ಹರಿದು ಬಂದಿದೆ.

  • ಮರುಬಳಕೆ ಇಂಧನ (Renewable Energy) ವಲಯದಲ್ಲಿ ₹4.25 ಲಕ್ಷ ಕೋಟಿ ಖಾತರಿಗಳ ಪೈಕಿ ₹1.41 ಲಕ್ಷ ಕೋಟಿ ಹೂಡಿಕೆಯಾಗಿ ಸಾಕಾರಗೊಂಡಿದೆ.

ಪ್ರಮುಖ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿರುವ ಕೆಲವು ಪ್ರಮುಖ ಕೈಗಾರಿಕಾ ಹೂಡಿಕೆಗಳ ಕುರಿತು ಸಚಿವರು ಮಾಹಿತಿ ನೀಡಿದ್ದು,

  • ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಸ್ಥಾಪನೆಗೆ ₹9,300 ಕೋಟಿ

  • ಎಂವಿ ಎನರ್ಜಿ ಕಂಪನಿಯಿಂದ ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಹಾಗೂ ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ ₹5,495 ಕೋಟಿ

  • ಜಿಂದಾಲ್ ಸ್ಟೀಲ್ಸ್ ಸಂಸ್ಥೆಯಿಂದ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ ₹7,000 ಕೋಟಿ

ಹೂಡಿಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆಗಳು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವ ಜೊತೆಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 hour ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

8 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago