Advertisement
ಸುದ್ದಿಗಳು

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

Share

2025ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಖಾತರಿ ದೊರಕಿದ್ದು, ಇದರ ಪೈಕಿ ಕಳೆದ ಡಿಸೆಂಬರ್ ವೇಳೆಗೆ ₹4.71 ಲಕ್ಷ ಕೋಟಿ ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಜನವರಿ 19ರಿಂದ 23ರವರೆಗೆ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಹೂಡಿಕೆ ಒಡಂಬಡಿಕೆಗಳ ಪೈಕಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿದೆ ಎಂದು ಹೇಳಿದರು.

ತಯಾರಿಕಾ ಮತ್ತು ಇಂಧನ ವಲಯದಲ್ಲಿ ಮಹತ್ವದ ಪ್ರಗತಿ : ಸಚಿವರ ಮಾಹಿತಿ ಪ್ರಕಾರ,

  • ತಯಾರಿಕಾ ವಲಯದಲ್ಲಿ ₹5.66 ಲಕ್ಷ ಕೋಟಿ ಹೂಡಿಕೆ ಖಾತರಿಗಳ ಪೈಕಿ ₹3.22 ಲಕ್ಷ ಕೋಟಿ ಈಗಾಗಲೇ ನೈಜ ಬಂಡವಾಳವಾಗಿ ಹರಿದು ಬಂದಿದೆ.

  • ಮರುಬಳಕೆ ಇಂಧನ (Renewable Energy) ವಲಯದಲ್ಲಿ ₹4.25 ಲಕ್ಷ ಕೋಟಿ ಖಾತರಿಗಳ ಪೈಕಿ ₹1.41 ಲಕ್ಷ ಕೋಟಿ ಹೂಡಿಕೆಯಾಗಿ ಸಾಕಾರಗೊಂಡಿದೆ.

ಪ್ರಮುಖ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿರುವ ಕೆಲವು ಪ್ರಮುಖ ಕೈಗಾರಿಕಾ ಹೂಡಿಕೆಗಳ ಕುರಿತು ಸಚಿವರು ಮಾಹಿತಿ ನೀಡಿದ್ದು,

  • ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಸ್ಥಾಪನೆಗೆ ₹9,300 ಕೋಟಿ

  • ಎಂವಿ ಎನರ್ಜಿ ಕಂಪನಿಯಿಂದ ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಹಾಗೂ ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ ₹5,495 ಕೋಟಿ

  • ಜಿಂದಾಲ್ ಸ್ಟೀಲ್ಸ್ ಸಂಸ್ಥೆಯಿಂದ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ ₹7,000 ಕೋಟಿ

ಹೂಡಿಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆಗಳು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವ ಜೊತೆಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 hour ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

9 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

10 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

10 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

17 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

22 hours ago