Advertisement
ಸುದ್ದಿಗಳು

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

Share

2025ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಖಾತರಿ ದೊರಕಿದ್ದು, ಇದರ ಪೈಕಿ ಕಳೆದ ಡಿಸೆಂಬರ್ ವೇಳೆಗೆ ₹4.71 ಲಕ್ಷ ಕೋಟಿ ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಜನವರಿ 19ರಿಂದ 23ರವರೆಗೆ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಹೂಡಿಕೆ ಒಡಂಬಡಿಕೆಗಳ ಪೈಕಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿದೆ ಎಂದು ಹೇಳಿದರು.

ತಯಾರಿಕಾ ಮತ್ತು ಇಂಧನ ವಲಯದಲ್ಲಿ ಮಹತ್ವದ ಪ್ರಗತಿ : ಸಚಿವರ ಮಾಹಿತಿ ಪ್ರಕಾರ,

  • ತಯಾರಿಕಾ ವಲಯದಲ್ಲಿ ₹5.66 ಲಕ್ಷ ಕೋಟಿ ಹೂಡಿಕೆ ಖಾತರಿಗಳ ಪೈಕಿ ₹3.22 ಲಕ್ಷ ಕೋಟಿ ಈಗಾಗಲೇ ನೈಜ ಬಂಡವಾಳವಾಗಿ ಹರಿದು ಬಂದಿದೆ.

  • ಮರುಬಳಕೆ ಇಂಧನ (Renewable Energy) ವಲಯದಲ್ಲಿ ₹4.25 ಲಕ್ಷ ಕೋಟಿ ಖಾತರಿಗಳ ಪೈಕಿ ₹1.41 ಲಕ್ಷ ಕೋಟಿ ಹೂಡಿಕೆಯಾಗಿ ಸಾಕಾರಗೊಂಡಿದೆ.

ಪ್ರಮುಖ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿರುವ ಕೆಲವು ಪ್ರಮುಖ ಕೈಗಾರಿಕಾ ಹೂಡಿಕೆಗಳ ಕುರಿತು ಸಚಿವರು ಮಾಹಿತಿ ನೀಡಿದ್ದು,

  • ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಸ್ಥಾಪನೆಗೆ ₹9,300 ಕೋಟಿ

  • ಎಂವಿ ಎನರ್ಜಿ ಕಂಪನಿಯಿಂದ ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಹಾಗೂ ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ ₹5,495 ಕೋಟಿ

  • ಜಿಂದಾಲ್ ಸ್ಟೀಲ್ಸ್ ಸಂಸ್ಥೆಯಿಂದ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ ₹7,000 ಕೋಟಿ

ಹೂಡಿಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆಗಳು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವ ಜೊತೆಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

3 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

12 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

12 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

17 hours ago