Advertisement
MIRROR FOCUS

ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ…! | ಕೃಷಿ ವಲಯದ ಅಭಿವೃದ್ದಿಯಲ್ಲಿ ಹಿನ್ನಡೆ | ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶ |

Share

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇಕಡ 10.2 ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ.  ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇಕಡ 8.2 ಆಗಿದೆ.

ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ 2022 ರ ಹಣಕಾಸು ಸಾಲಿನಲ್ಲಿ ಶೇಕಡ 15.5 ರಷ್ಟು ಪ್ರಗತಿ ಕಂಡಿದ್ದು, 2023 ರ ಅವಧಿಯಲ್ಲಿ ಶೇಕಡ 8 ಕ್ಕೆ ಕುಸಿತ ಅನುಭವಿಸಿದೆ. ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ. 2024-25 ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇಕಡ 9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡ 10.5 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

24 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

24 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago