2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಬಾರಿ ರೈತರು ತಮ್ಮ ಬೆಳೆ ಮಾಹಿತಿಯನ್ನು ತಾವೇ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೃಷಿ ಇಲಾಖೆಯ ಫ್ರೂಟ್ಸ್ (Fruits) ತಂತ್ರಾಂಶದಲ್ಲಿ ಎಫ್.ಐ.ಡಿ. (FID) ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಬಹುದು.
ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?
FID ಇಲ್ಲದ ರೈತರು ಏನು ಮಾಡಬೇಕು? : ಎಫ್.ಐ.ಡಿ. ಸಂಖ್ಯೆ ಇಲ್ಲದ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ FID ಸಂಖ್ಯೆ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಬೆಳೆ ಸಮೀಕ್ಷೆ ಏಕೆ ಮಹತ್ವದ್ದು? : ರೈತರು ಸಲ್ಲಿಸುವ ಬೆಳೆ ಮಾಹಿತಿಯನ್ನು ಈ ಕೆಳಗಿನ ಉದ್ದೇಶಗಳಿಗೆ ಬಳಸಲಾಗುತ್ತದೆ.
ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಯಾವುದೇ ಲೋಪದೋಷಗಳಿಲ್ಲದೆ ತಮ್ಮ ಜಮೀನಿನ ಸರ್ವೆ ನಂಬರ್ವಾರು ಬೆಳೆ ವಿವರವನ್ನು ತಾವೇ ಖುದ್ದಾಗಿ ಮೊಬೈಲ್ ತಂತ್ರಾಂಶದಲ್ಲಿ ದಾಖಲಿಸಿ ಮುಂಗಾರು 2026-27ರ ಬೆಳೆ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
The Karnataka Agriculture Department has launched the 2026-27 Kharif Crop Survey, allowing farmers to submit crop details themselves through the “Mungaru Raithara Bele Sameekshe-2026-27” mobile app. The data will be used for crop insurance, disaster relief, beneficiary schemes, crop statistics, and land records.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…