Advertisement
ಸುದ್ದಿಗಳು

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

Share

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಬಾರಿ ರೈತರು ತಮ್ಮ ಬೆಳೆ ಮಾಹಿತಿಯನ್ನು ತಾವೇ ಮೊಬೈಲ್‌ ತಂತ್ರಾಂಶದ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿ ಇಲಾಖೆಯ ಫ್ರೂಟ್ಸ್ (Fruits) ತಂತ್ರಾಂಶದಲ್ಲಿ ಎಫ್‌.ಐ‌.ಡಿ. (FID) ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಬಹುದು.

ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?

  • ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
  • ಇ-ಕೆವೈಸಿ (e-KYC) ಮೂಲಕ ಆಧಾರ್‌ ದೃಢೀಕರಣ ಮಾಡಬೇಕು.
  • ಆಧಾರ್‌ ಸಂಖ್ಯೆಯನ್ನು ನಮೂದಿಸಿ OTP ಪಡೆಯಬೇಕು.
  • OTP ದಾಖಲಿಸಿದ ಬಳಿಕ ರೈತರ FID ಸಂಖ್ಯೆಗೆ ಸಂಬಂಧಿಸಿದ ಜಮೀನುಗಳ ಮಾಹಿತಿ ಲಭ್ಯವಾಗುತ್ತದೆ.
  • ನಂತರ ಸರ್ವೆ ನಂಬರ್‌, ಹಿಸ್ಸಾ ನಂಬರ್‌, ಮಾಲೀಕರ ಹೆಸರು ಸೇರಿದಂತೆ ಅಗತ್ಯ ಮಾಹಿತಿಯನ್ನು ಆಯ್ಕೆ ಮಾಡಬೇಕು.
  • ಜಮೀನಿನ ಗಡಿ ವ್ಯಾಪ್ತಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಸ್ಥಳದಲ್ಲೇ ಫೋಟೋ ತೆಗೆದು ಅಪ್‌ಲೋಡ್‌ ಮಾಡಬೇಕು.

FID ಇಲ್ಲದ ರೈತರು ಏನು ಮಾಡಬೇಕು? : ಎಫ್‌.ಐ‌.ಡಿ. ಸಂಖ್ಯೆ ಇಲ್ಲದ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ FID ಸಂಖ್ಯೆ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಬೆಳೆ ಸಮೀಕ್ಷೆ ಏಕೆ ಮಹತ್ವದ್ದು? : ರೈತರು ಸಲ್ಲಿಸುವ ಬೆಳೆ ಮಾಹಿತಿಯನ್ನು ಈ ಕೆಳಗಿನ ಉದ್ದೇಶಗಳಿಗೆ ಬಳಸಲಾಗುತ್ತದೆ.

  • ಪ್ರಕೃತಿ ವಿಕೋಪ ಪರಿಹಾರ ವಿತರಣೆ
  • ಬೆಳೆ ವಿಮೆ ಯೋಜನೆ ಅನುಷ್ಠಾನ
  • ವಿವಿಧ ಬೆಳೆಗಳ ವಿಸ್ತೀರ್ಣ ವರದಿ ತಯಾರಿ
  • ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಯೋಜನೆಗಳು
  • ರೈತರ ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವ ಕಾರ್ಯ

ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಯಾವುದೇ ಲೋಪದೋಷಗಳಿಲ್ಲದೆ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ತಾವೇ ಖುದ್ದಾಗಿ ಮೊಬೈಲ್‌ ತಂತ್ರಾಂಶದಲ್ಲಿ ದಾಖಲಿಸಿ ಮುಂಗಾರು 2026-27ರ ಬೆಳೆ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

The Karnataka Agriculture Department has launched the 2026-27 Kharif Crop Survey, allowing farmers to submit crop details themselves through the “Mungaru Raithara Bele Sameekshe-2026-27” mobile app. The data will be used for crop insurance, disaster relief, beneficiary schemes, crop statistics, and land records.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

2 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

22 minutes ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

1 hour ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

2 hours ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

6 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

9 hours ago