Advertisement
ಸುದ್ದಿಗಳು

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

Share

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಬಾರಿ ರೈತರು ತಮ್ಮ ಬೆಳೆ ಮಾಹಿತಿಯನ್ನು ತಾವೇ ಮೊಬೈಲ್‌ ತಂತ್ರಾಂಶದ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿ ಇಲಾಖೆಯ ಫ್ರೂಟ್ಸ್ (Fruits) ತಂತ್ರಾಂಶದಲ್ಲಿ ಎಫ್‌.ಐ‌.ಡಿ. (FID) ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಬಹುದು.

ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?

  • ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
  • ಇ-ಕೆವೈಸಿ (e-KYC) ಮೂಲಕ ಆಧಾರ್‌ ದೃಢೀಕರಣ ಮಾಡಬೇಕು.
  • ಆಧಾರ್‌ ಸಂಖ್ಯೆಯನ್ನು ನಮೂದಿಸಿ OTP ಪಡೆಯಬೇಕು.
  • OTP ದಾಖಲಿಸಿದ ಬಳಿಕ ರೈತರ FID ಸಂಖ್ಯೆಗೆ ಸಂಬಂಧಿಸಿದ ಜಮೀನುಗಳ ಮಾಹಿತಿ ಲಭ್ಯವಾಗುತ್ತದೆ.
  • ನಂತರ ಸರ್ವೆ ನಂಬರ್‌, ಹಿಸ್ಸಾ ನಂಬರ್‌, ಮಾಲೀಕರ ಹೆಸರು ಸೇರಿದಂತೆ ಅಗತ್ಯ ಮಾಹಿತಿಯನ್ನು ಆಯ್ಕೆ ಮಾಡಬೇಕು.
  • ಜಮೀನಿನ ಗಡಿ ವ್ಯಾಪ್ತಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಸ್ಥಳದಲ್ಲೇ ಫೋಟೋ ತೆಗೆದು ಅಪ್‌ಲೋಡ್‌ ಮಾಡಬೇಕು.

FID ಇಲ್ಲದ ರೈತರು ಏನು ಮಾಡಬೇಕು? : ಎಫ್‌.ಐ‌.ಡಿ. ಸಂಖ್ಯೆ ಇಲ್ಲದ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ FID ಸಂಖ್ಯೆ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಬೆಳೆ ಸಮೀಕ್ಷೆ ಏಕೆ ಮಹತ್ವದ್ದು? : ರೈತರು ಸಲ್ಲಿಸುವ ಬೆಳೆ ಮಾಹಿತಿಯನ್ನು ಈ ಕೆಳಗಿನ ಉದ್ದೇಶಗಳಿಗೆ ಬಳಸಲಾಗುತ್ತದೆ.

  • ಪ್ರಕೃತಿ ವಿಕೋಪ ಪರಿಹಾರ ವಿತರಣೆ
  • ಬೆಳೆ ವಿಮೆ ಯೋಜನೆ ಅನುಷ್ಠಾನ
  • ವಿವಿಧ ಬೆಳೆಗಳ ವಿಸ್ತೀರ್ಣ ವರದಿ ತಯಾರಿ
  • ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಯೋಜನೆಗಳು
  • ರೈತರ ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವ ಕಾರ್ಯ

ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಯಾವುದೇ ಲೋಪದೋಷಗಳಿಲ್ಲದೆ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ತಾವೇ ಖುದ್ದಾಗಿ ಮೊಬೈಲ್‌ ತಂತ್ರಾಂಶದಲ್ಲಿ ದಾಖಲಿಸಿ ಮುಂಗಾರು 2026-27ರ ಬೆಳೆ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

The Karnataka Agriculture Department has launched the 2026-27 Kharif Crop Survey, allowing farmers to submit crop details themselves through the “Mungaru Raithara Bele Sameekshe-2026-27” mobile app. The data will be used for crop insurance, disaster relief, beneficiary schemes, crop statistics, and land records.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago