Advertisement
ಸುದ್ದಿಗಳು

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

Share

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಬಾರಿ ರೈತರು ತಮ್ಮ ಬೆಳೆ ಮಾಹಿತಿಯನ್ನು ತಾವೇ ಮೊಬೈಲ್‌ ತಂತ್ರಾಂಶದ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿ ಇಲಾಖೆಯ ಫ್ರೂಟ್ಸ್ (Fruits) ತಂತ್ರಾಂಶದಲ್ಲಿ ಎಫ್‌.ಐ‌.ಡಿ. (FID) ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಬಹುದು.

ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?

  • ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
  • ಇ-ಕೆವೈಸಿ (e-KYC) ಮೂಲಕ ಆಧಾರ್‌ ದೃಢೀಕರಣ ಮಾಡಬೇಕು.
  • ಆಧಾರ್‌ ಸಂಖ್ಯೆಯನ್ನು ನಮೂದಿಸಿ OTP ಪಡೆಯಬೇಕು.
  • OTP ದಾಖಲಿಸಿದ ಬಳಿಕ ರೈತರ FID ಸಂಖ್ಯೆಗೆ ಸಂಬಂಧಿಸಿದ ಜಮೀನುಗಳ ಮಾಹಿತಿ ಲಭ್ಯವಾಗುತ್ತದೆ.
  • ನಂತರ ಸರ್ವೆ ನಂಬರ್‌, ಹಿಸ್ಸಾ ನಂಬರ್‌, ಮಾಲೀಕರ ಹೆಸರು ಸೇರಿದಂತೆ ಅಗತ್ಯ ಮಾಹಿತಿಯನ್ನು ಆಯ್ಕೆ ಮಾಡಬೇಕು.
  • ಜಮೀನಿನ ಗಡಿ ವ್ಯಾಪ್ತಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಸ್ಥಳದಲ್ಲೇ ಫೋಟೋ ತೆಗೆದು ಅಪ್‌ಲೋಡ್‌ ಮಾಡಬೇಕು.

FID ಇಲ್ಲದ ರೈತರು ಏನು ಮಾಡಬೇಕು? : ಎಫ್‌.ಐ‌.ಡಿ. ಸಂಖ್ಯೆ ಇಲ್ಲದ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ FID ಸಂಖ್ಯೆ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಬೆಳೆ ಸಮೀಕ್ಷೆ ಏಕೆ ಮಹತ್ವದ್ದು? : ರೈತರು ಸಲ್ಲಿಸುವ ಬೆಳೆ ಮಾಹಿತಿಯನ್ನು ಈ ಕೆಳಗಿನ ಉದ್ದೇಶಗಳಿಗೆ ಬಳಸಲಾಗುತ್ತದೆ.

  • ಪ್ರಕೃತಿ ವಿಕೋಪ ಪರಿಹಾರ ವಿತರಣೆ
  • ಬೆಳೆ ವಿಮೆ ಯೋಜನೆ ಅನುಷ್ಠಾನ
  • ವಿವಿಧ ಬೆಳೆಗಳ ವಿಸ್ತೀರ್ಣ ವರದಿ ತಯಾರಿ
  • ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಯೋಜನೆಗಳು
  • ರೈತರ ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವ ಕಾರ್ಯ

ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಯಾವುದೇ ಲೋಪದೋಷಗಳಿಲ್ಲದೆ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ತಾವೇ ಖುದ್ದಾಗಿ ಮೊಬೈಲ್‌ ತಂತ್ರಾಂಶದಲ್ಲಿ ದಾಖಲಿಸಿ ಮುಂಗಾರು 2026-27ರ ಬೆಳೆ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

The Karnataka Agriculture Department has launched the 2026-27 Kharif Crop Survey, allowing farmers to submit crop details themselves through the “Mungaru Raithara Bele Sameekshe-2026-27” mobile app. The data will be used for crop insurance, disaster relief, beneficiary schemes, crop statistics, and land records.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

13 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

13 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

17 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

17 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

18 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago