ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತದಾನವು ಇನ್ನು ಮುಂದೆ ಇವಿಎಂ (Electronic Voting Machine) ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ. ಈ ಸಂಬಂಧ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸಚಿವ ಸಂಪುಟ ಅನುಮೋದಿಸಿದೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ Karnataka Gram Swaraj and Panchayat Raj (Amendment) Bill, 2026 ಮಸೂದೆಗೆ ಸಚಿವ ಸಂಪುಟ ಹಸಿರು ನಿಶಾನೆ ನೀಡಿದ್ದು, ಮತಪತ್ರಗಳು ಮತ್ತು ಮತಪೆಟ್ಟಿಗೆಗಳ ಬಳಕೆಗೆ ದಾರಿ ಮಾಡಿಕೊಟ್ಟಿದೆ.
ಸಂಪುಟ ಸಭೆಯ ಬಳಿಕ ಮಾತನಾಡಿದ ರಾಜ್ಯ ಸಚಿವ ಎಚ್ ಕೆ ಪಾಟೀಲ್, ಪಂಚಾಯತ್ ಚುನಾವಣೆಗಳಲ್ಲಿ ಮತಪತ್ರಗಳು ಮತ್ತು ಮತಪೆಟ್ಟಿಗೆಗಳನ್ನು ಬಳಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಇದರೊಂದಿಗೆ ಗ್ರಾಮ ಪಂಚಾಯತ್ ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈ ತಿದ್ದುಪಡಿ ಮೂಲಕ ಇವಿಎಂ ಬಳಕೆಯನ್ನು ಕೈಬಿಟ್ಟು ಮತಪತ್ರ ಪದ್ಧತಿಗೆ ಮರಳುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಕ್ರಮ ಚುನಾವಣೆ ಪಾರದರ್ಶಕತೆ ಹಾಗೂ ಸ್ಥಳೀಯ ಮಟ್ಟದ ನಿರ್ವಹಣಾ ಸುಲಭತೆಗೆ ಸಹಕಾರಿ ಆಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…