ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

May 8, 2024
9:54 PM

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ   ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ  ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.

ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.

ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ  69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ  68.81% ಮತದಾನವಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್? 

* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್-‌ 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror