ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

May 8, 2024
9:54 PM

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ   ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ  ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.

ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.

ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ  69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ  68.81% ಮತದಾನವಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್? 

* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್-‌ 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror