Advertisement
MIRROR FOCUS

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

Share

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ   ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ  ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.

Advertisement
Advertisement

ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.

ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ  69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ  68.81% ಮತದಾನವಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್? 

* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್-‌ 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

9 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago