Advertisement
MIRROR FOCUS

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

Share

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ   ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ  ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.

ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.

ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ  69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ  68.81% ಮತದಾನವಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್? 

* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್-‌ 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

18 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago