ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.
ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.
ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ 69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ 68.81% ಮತದಾನವಾಗಿತ್ತು.
ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್?
* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್- 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%
Source : ಅಂತರ್ಜಾಲ ಮಾಹಿತಿ
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…