ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ ಸುಗಮವಾಗಿ ನಡೆದಿದೆ. ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ರಣಬಿಸಿಲನ್ನು ಲೆಕ್ಕಿಸದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.
ಕೆಲವೆಡೆ ಸರತಿ ಸಾಲಲ್ಲಿ ನಿಂತಿದ್ದ ಕಾರಣ ಆರು ಗಂಟೆ ನಂತರವೂ ಮತದಾನ ನಡೀತು. ಮಾಹಿತಿ ಪ್ರಕಾರ 70.03% ರಷ್ಟು ಮತದಾನ ಆಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪಚುನಾವಣೆಯೂ ಮುಗಿದಿದೆ. ಕ್ಷೇತ್ರದ ಬಾದ್ಯಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಒಬ್ಬರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ. 2019ಕ್ಕೆ ಹೋಲಿಸಿದ್ರೆ ಉತ್ತರ ಕನ್ನಡ, ಬಾಗಲಕೋಟೆ ಹೊರತುಪಡಿಸಿ ಎಲ್ಲ ಕಡೆ ಶೇಕಡಾವಾರು ಮತದಾನದಲ್ಲಿ ಹೆಚ್ಚಳವಾಗಿದೆ.
ಕರ್ನಾಟಕದಲ್ಲಿ ಮೊದಲ ಸುತ್ತಿನಲ್ಲಿ 69.56% ಮತದಾನ ಹಾಗೂ ಎರಡನೇ ಸುತ್ತಿನಲ್ಲಿ 70.3% ಮತದಾನವಾಗಿದೆ. 2019ರಲ್ಲಿ 68.81% ಮತದಾನವಾಗಿತ್ತು.
ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್?
* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್- 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%
Source : ಅಂತರ್ಜಾಲ ಮಾಹಿತಿ
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…