ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

April 16, 2025
7:46 AM

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಆರ್‌ಟಿಒ ಗಡಿ ಚೆಕ್‌ಪೋಸ್ಟ್ ತೆಗೆಯಬೇಕು, ಎಫ್‌ಸಿ ಶುಲ್ಕ ಕಡಿಮೆ ಮಾಡಬೇಕು, ಸರಕು ಸಾಗಾಣೆ ವಾಹನ ನಿರ್ಬಂಧ ಹಿಂಪಡೆಯಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ರಾಜ್ಯದ ವಿವಿಧೆಡೆಗಳಲ್ಲಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಂಡಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು  ಸೇರಿದಂತೆ ಪ್ರಮುಖ ನಗರಗಳಲ್ಲಿ ಲಾರಿ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಟನೆ ಕರೆ ನೀಡಿರುವ ಮುಷ್ಕರಕ್ಕೆ ದೇಶದ 60 ವಿವಿಧ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿವೆ. ಸುಮಾರು 6 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ನಡುವೆ ಲಾರಿ ಮಾಲೀಕರ ಜೊತೆ ಸಿಎಂ ನಿವಾಸದಲ್ಲಿ ನಡೆದ  ಮಾತುಕತೆಯಲ್ಲಿ ಲಾರಿ ಮಾಲೀಕರು ಇಟ್ಟ ಎಲ್ಲಾ ಬೇಡಿಕೆ ಪೂರೈಕೆಗೆ ಸರ್ಕಾರ ಒಪ್ಪಿಲ್ಲ. ಹೀಗಾಗಿ ಲಾರಿ ಮಾಲೀಕರು ಮುಷ್ಕರ ವಾಪಸ್ ಪಡೆಯದಿರಲು ನಿರ್ಧರಿಸಿದ್ದಾರೆ. ಮತ್ತಷ್ಟು ಉಗ್ರ ಹೋರಾಟ ಮಾಡುವ ಸೂಚನೆಯನ್ನು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror