ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಆರ್ಟಿಒ ಗಡಿ ಚೆಕ್ಪೋಸ್ಟ್ ತೆಗೆಯಬೇಕು, ಎಫ್ಸಿ ಶುಲ್ಕ ಕಡಿಮೆ ಮಾಡಬೇಕು, ಸರಕು ಸಾಗಾಣೆ ವಾಹನ ನಿರ್ಬಂಧ ಹಿಂಪಡೆಯಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಗಳಲ್ಲಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಂಡಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಲಾರಿ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಟನೆ ಕರೆ ನೀಡಿರುವ ಮುಷ್ಕರಕ್ಕೆ ದೇಶದ 60 ವಿವಿಧ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿವೆ. ಸುಮಾರು 6 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ನಡುವೆ ಲಾರಿ ಮಾಲೀಕರ ಜೊತೆ ಸಿಎಂ ನಿವಾಸದಲ್ಲಿ ನಡೆದ ಮಾತುಕತೆಯಲ್ಲಿ ಲಾರಿ ಮಾಲೀಕರು ಇಟ್ಟ ಎಲ್ಲಾ ಬೇಡಿಕೆ ಪೂರೈಕೆಗೆ ಸರ್ಕಾರ ಒಪ್ಪಿಲ್ಲ. ಹೀಗಾಗಿ ಲಾರಿ ಮಾಲೀಕರು ಮುಷ್ಕರ ವಾಪಸ್ ಪಡೆಯದಿರಲು ನಿರ್ಧರಿಸಿದ್ದಾರೆ. ಮತ್ತಷ್ಟು ಉಗ್ರ ಹೋರಾಟ ಮಾಡುವ ಸೂಚನೆಯನ್ನು ನೀಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…