ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

June 6, 2026
1:37 PM
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದ್ದು, ಜೂನ್ 12-13ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.

ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದರೂ ಅದರ ಪ್ರಭಾವ ಇನ್ನೂ ದುರ್ಬಲವಾಗಿಯೇ ಮುಂದುವರಿಯುವ ಲಕ್ಷಣಗಳು ಕಂಡುಬಂದಿವೆ. 07.06.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ನಿರೀಕ್ಷೆಯಿದ್ದು, ವ್ಯಾಪಕ ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಕರಾವಳಿ ಭಾಗದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದ ವೇಳೆ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು-ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ ಮುಂಗಾರು ಸ್ವಲ್ಪ ಚೇತರಿಸಿಕೊಳ್ಳುವ ಸಾಧ್ಯತೆ ಇದ್ದರೂ, ಜೂನ್ 12 ಅಥವಾ 13 ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದ ವೇಳೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 8ರಿಂದ ಮುಂಗಾರು ಚಟುವಟಿಕೆ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದ್ದರೂ, ಜೂನ್ 13 ರ ನಂತರ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಭಾಗದಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಈಗಿನ ಮಳೆಯ ಚಟುವಟಿಕೆ ಜೂನ್ 12 ರವರೆಗೆ ಮುಂದುವರಿಯುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ಮಳೆಯ ವಾತಾವರಣ ಜೂನ್ 11ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಟ್ಟಾರೆಯಾಗಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ, ಅದರ ಬಲ ಇನ್ನೂ ಹೆಚ್ಚಾಗಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ ಕೆಲ ದಿನಗಳ ಕಾಲ ಮುಂಗಾರು ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದ್ದು, ನಂತರ ಮತ್ತೆ ದುರ್ಬಲಗೊಳ್ಳುವ ಸಾಧ್ಯತೆ ಇದೆ.

The southwest monsoon has entered Karnataka but remains weak across most regions. Coastal districts may see a slight increase in rainfall activity from June 8, while Malnad and interior districts are expected to receive scattered showers. However, weather models indicate that the monsoon could weaken again around June 12–13.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror