Advertisement
ವೆದರ್ ಮಿರರ್

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

Advertisement

ಕರಾವಳಿ ಭಾಗದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ದಿನದ ವೇಳೆ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಕರಾವಳಿ ತೀರ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಜೂ.8ರಿಂದ 14ರವರೆಗೆ ಮುಂಗಾರು ಚಟುವಟಿಕೆಗಳು ಚುರುಕುಗೊಂಡು ಉತ್ತಮ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Advertisement

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗಲಿದೆ. ವಿಶೇಷವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಜೂ. 8ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗಲಿದ್ದು, ಜೂ. 15ರ ಬಳಿಕ ಮಳೆಯ ತೀವ್ರತೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಮತ್ತು ರಾತ್ರಿ ವೇಳೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೂ. 11ರಿಂದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ.

Advertisement

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂ. 10ರಿಂದ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.

Advertisement

ಅರಬ್ಬಿ ಸಮುದ್ರದ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಉಂಟಾಗಿದ್ದು, ಇದು ಮುಂಗಾರು ಮಾರುತಗಳ ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿದೆ. ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದರೂ, ಉತ್ತಮ ಮಳೆಯ ನಿರೀಕ್ಷೆ ಮುಂದುವರಿದಿದೆ. ಈ ವ್ಯವಸ್ಥೆ ಶಿಥಿಲಗೊಂಡ ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Monsoon activity is likely to intensify across Karnataka from June 8. Coastal and Malnad districts are expected to receive good rainfall until June 14, while several districts in North and South Interior Karnataka may witness thunderstorms and evening showers. Heavy rainfall chances along the coast remain low for now due to a mid-level wind circulation over the Arabian Sea.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 hour ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

4 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago