Advertisement
ವೆದರ್ ಮಿರರ್

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

Share

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಗಿಂತ ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗದಲ್ಲಿ ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಘಟ್ಟದ ಕೆಳಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ. ಆದರೆ ಒಟ್ಟಾರೆ ಮಳೆಯ ಚಟುವಟಿಕೆ ಕಡಿಮೆಯಾಗುತ್ತಿದ್ದು, ಮೇ 26ರ ನಂತರ ನೈರುತ್ಯ ಮುಂಗಾರು ಆಗಮನದ ಸಾಧ್ಯತೆ ಕಾಣುತ್ತಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬಿಸಿಲಿನ ವಾತಾವರಣದ ಜೊತೆಗೆ ಮೋಡ ಕವಿದ ಸ್ಥಿತಿ ಮುಂದುವರಿಯಬಹುದು. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ವೇಳೆಯಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಈಗಿನ ಹವಾಮಾನ ಬೆಳವಣಿಗೆಗಳನ್ನು ಗಮನಿಸಿದರೆ ಮಲೆನಾಡಿಗೂ ಮೇ 26 ಅಥವಾ 27ರಿಂದ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಕಲಬುರ್ಗಿ ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗಗಳು, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಆಂಧ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಬಹುದು. ಈ ಭಾಗಗಳಲ್ಲಿ ಮೇ 25ರ ನಂತರದ ವಾತಾವರಣ ಬೆಳವಣಿಗೆಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕಾಗಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸುತ್ತಮುತ್ತ ಮಾತ್ರ ಸಂಜೆ ವೇಳೆಯಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮುಂದಿನ ಕೆಲವು ದಿನಗಳು ಇದೇ ರೀತಿಯ ಹವಾಮಾನ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ಇನ್ನೊಂದೆಡೆ ಅರಬ್ಬಿ ಸಮುದ್ರದಲ್ಲಿ ಮುಂದಿನ ಎರಡು ದಿನಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆ ಇದೆ. ಸುಮಾರು ಮೇ 25ರ ವೇಳೆಗೆ ಈ ಚಟುವಟಿಕೆ ಯೆಮನ್ ಕರಾವಳಿ ಭಾಗದತ್ತ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮವಾಗಿ ಮುಂಗಾರು ಮಾರುತಗಳ ವೇಗ ತಾತ್ಕಾಲಿಕವಾಗಿ ಕುಂಠಿತಗೊಂಡು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಆದರೆ ಮೇ ಕೊನೆಯ ವಾರದಲ್ಲಿ ಮತ್ತೆ ಚಟುವಟಿಕೆ ಚುರುಕಾಗುವ ನಿರೀಕ್ಷೆಯಿದೆ.

ಈ ನಡುವೆ ಸೋಮಾಲಿಯ ಜೆಟ್ ವೇವ್ಸ್ ಬಲಿಷ್ಠಗೊಳ್ಳುತ್ತಿರುವ ಲಕ್ಷಣಗಳು ಕಂಡುಬರುತ್ತಿದ್ದು, ಉತ್ತರ ಭಾರತದ ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಗಳಿವೆ. ಹವಾಮಾನ ತಜ್ಞರು ಮುಂದಿನ ಒಂದು ವಾರದ ವಾತಾವರಣದ ಮೇಲೆ ವಿಶೇಷ ಗಮನ ಹರಿಸುತ್ತಿದ್ದಾರೆ.

Rain activity has reduced across Karnataka’s coastal and Malnad regions, with mostly sunny and partly cloudy conditions expected till May 21 morning. Light thunder showers may occur in isolated places, while southwest monsoon onset is likely around May 26–27. Atmospheric circulation over the Arabian Sea may temporarily weaken monsoon winds before conditions improve again toward the end of May.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

9 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

9 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

9 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

20 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

20 hours ago