ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುವಿಕೆ ಪಶ್ಚಿಮ ಬಂಗಾಳ–ಒಡಿಶಾ ಕರಾವಳಿಯನ್ನು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಚಟುವಟಿಕೆ ಹೆಚ್ಚಾಗಿದೆ.
ಕರಾವಳಿ ಕರ್ನಾಟಕ: ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ. ಈ ವಾತಾವರಣ ಆಗಸ್ಟ್ 25ರವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು: ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಯಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಆಗಸ್ಟ್ 25ರವರೆಗೆ ಮಳೆ ಮುಂದುವರಿಯಬಹುದು.
ಉತ್ತರ ಒಳನಾಡು: ಇಂದು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ ಎರಡು ದಿನಗಳ ಕಾಲವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು: ದಾವಣಗೆರೆ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆಯಿದೆ. ಹಾಸನ, ಉತ್ತರ ತುಮಕೂರು ಹಾಗೂ ಚಿತ್ರದುರ್ಗ ಭಾಗಗಳಲ್ಲಿ ಬಿಸಿಲು–ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಆಗಸ್ಟ್ 25ರವರೆಗೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಆಗಸ್ಟ್ 25ರ ಬಳಿಕ ಏನಾಗಬಹುದು? : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತಿರುವಿಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ದಾಟಿ ಭೂಭಾಗ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮುಂಗಾರು ಚುರುಕಾಗಿದೆ. ಆದರೆ ಆಗಸ್ಟ್ 25ರ ನಂತರ ಈ ವ್ಯವಸ್ಥೆ ಶಿಥಿಲಗೊಳ್ಳುವ ಸಾಧ್ಯತೆಯಿದ್ದು, ಅದರೊಂದಿಗೆ ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣಗಳಿವೆ.
ರೈತರಿಗೆ ಸೂಚನೆ: ಸದ್ಯ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ತೋಟಗಾರಿಕಾ ಬೆಳೆಗಳಲ್ಲಿ ಸಿಂಪಡಣೆ, ಗೊಬ್ಬರ ನೀಡಿಕೆ ಹಾಗೂ ಕೊಯ್ಲು ಕಾರ್ಯಗಳನ್ನು ಸ್ಥಳೀಯ ಮಳೆ ಪರಿಸ್ಥಿತಿಯನ್ನು ಗಮನಿಸಿ ನಿರ್ವಹಿಸುವುದು ಸೂಕ್ತ. ಮುಂದಿನ ಎರಡು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ಆಗಸ್ಟ್ 25ರವರೆಗೆ ಕರಾವಳಿ–ಮಲೆನಾಡಿನಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ತೋಟಗಾರಿಕಾ ಬೆಳೆಗಳಲ್ಲಿ ಸಿಂಪಡಣೆ, ಗೊಬ್ಬರ ನೀಡಿಕೆ ಮತ್ತು ಕೊಯ್ಲು ಕಾರ್ಯಗಳನ್ನು ಸ್ಥಳೀಯ ಮಳೆ ಪರಿಸ್ಥಿತಿಯನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Karnataka is likely to experience an active monsoon phase until August 25, with intermittent good rainfall expected across the coastal districts, while parts of the Malnad region may also receive normal to good showers. Most parts of North Interior Karnataka may receive rain for the next two days, while scattered rainfall is expected over parts of South Interior Karnataka. The current increase in monsoon activity is linked to a system moving inland after crossing the West Bengal–Odisha coast, but the monsoon may weaken again after August 25 as the system loses strength.
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…