Advertisement
ಹವಾಮಾನ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ

Share

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ನಂತರ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ.

ಕರಾವಳಿ ಭಾಗಗಳಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಾವೇರಿ ಹಾಗೂ ಶಿವಮೊಗ್ಗ ಗಡಿಭಾಗಗಳಲ್ಲಿಯೂ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಹವಾಮಾನ ವಿಶ್ಲೇಷಣೆಯ ಪ್ರಕಾರ ರಾಜ್ಯದ ಕರಾವಳಿಯಲ್ಲಿ ಜೂನ್ 6ರ ವೇಳೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ವ್ಯಕ್ತವಾಗಿದೆ. ಅದುವರೆಗೆ ಇನ್ನೂ 2 ಅಥವಾ 3 ಬಾರಿ ಮಳೆಯ ಚಟುವಟಿಕೆ ಕಾಣಿಸಬಹುದು ಎಂದು ಅಂದಾಜಿಸಲಾಗಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಂಜೆ ಅಥವಾ ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೇ 27ರವರೆಗೆ ಮಳೆಯ ಚಟುವಟಿಕೆ ಮುಂದುವರಿದರೂ ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಪ್ರಸ್ತುತ ಅಂದಾಜಿನ ಪ್ರಕಾರ ಮಲೆನಾಡು ಭಾಗಗಳಲ್ಲಿ ಜೂನ್ 7 ಅಥವಾ 8ರಿಂದ ಮುಂಗಾರು ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಬಹುದಾಗಿದ್ದು, ಗಾಳಿಯ ಒತ್ತಡ ಹೆಚ್ಚಾದಲ್ಲಿ ಮಾತ್ರ ಮಳೆಯ ಸಾಧ್ಯತೆಗಳಿವೆ. ಮೇ 27 ನಂತರ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕುಸಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆಯ ವಾತಾವರಣ ಇರಬಹುದಾದರೂ ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದೇ ವೇಳೆ, ಬಂಗಾಳಕೊಲ್ಲಿಯಲ್ಲಿ ಜೂನ್ 2ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚಟುವಟಿಕೆ ಮತ್ತಷ್ಟು ಚುರುಕಾಗುವ ನಿರೀಕ್ಷೆ ಇದೆ. ಆದರೆ ಸೋಮಾಲಿಯಾ ಜಟ್ ಸ್ಟ್ರೀಮ್ ಉತ್ತರದತ್ತ ಸೆಳೆಯಲ್ಪಡುವ ಕಾರಣ ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇದೆ.

ಕೃಷಿ ಚಟುವಟಿಕೆಗಳು ಆರಂಭವಾಗುತ್ತಿರುವ ಸಂದರ್ಭದಲ್ಲಿ ಈ ಮಳೆಯ ಅವಧಿ ರೈತರಿಗೆ ತಾತ್ಕಾಲಿಕ ನೆರವಾಗಬಹುದಾದರೂ, ನಿರಂತರ ಮಳೆ ಇಲ್ಲದಿರುವುದು ಬಿತ್ತನೆ ಯೋಜನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಇದೆ. ವಿಶೇಷವಾಗಿ ಅಡಿಕೆ, ಕಾಳುಮೆಣಸು ಹಾಗೂ ತೋಟಗಾರಿಕಾ ಬೆಳೆ ಪ್ರದೇಶಗಳಲ್ಲಿ ಮುಂಗಾರು ಆಗಮನದ ನಿರೀಕ್ಷೆಯ ನಡುವೆ ಕೃಷಿಕರು ಹವಾಮಾನ ಬೆಳವಣಿಗೆಗಳತ್ತ ಕಣ್ಣಿಟ್ಟಿದ್ದಾರೆ.

Thunderstorms and scattered rains are likely across several parts of Karnataka over the next two days, especially in Coastal, Malnad, and South Interior regions. Southwest monsoon is expected to enter Coastal Karnataka around June 6 and Malnad by June 7 or 8, while a low-pressure system over the Bay of Bengal may further strengthen monsoon activity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

7 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

8 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

13 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago