ಕಳೆ 15 ದಿನಗಳಲ್ಲಿ 350 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ. ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು. ಪೂರೈಕೆಗೆ ನಾವು ಸನ್ನದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರದಿಂದಾಗಿ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಡಿಯಿಂದ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ. ತುಪ್ಪ ತುಂಬಿದ ಟ್ಯಾಂಕರ್ಗೆ ಜಿಪಿಎಸ್ ಅಳವಡಿಕೆ ಮಾಡಿ ಕಳುಹಿಸಿಲು ನಿರ್ಧರಿಸಿದ್ದು, ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ. ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"