Advertisement
MIRROR FOCUS

ರೇಬಿಸ್ ನಿರ್ಮೂಲನೆಗೆ ಕರ್ನಾಟಕದ ಹೊಸ ಪ್ರಯತ್ನ | ವಿಶ್ವವಿದ್ಯಾಲಯದಿಂದ ಬೀದಿ ನಾಯಿಗಳಿಗೆ ಓರಲ್ ರೇಬಿಸ್ ಲಸಿಕೆ ಸಂಶೋಧನೆ

Share

ರೇಬಿಸ್ ರೋಗ ನಿರ್ಮೂಲನೆ ಹಾಗೂ ನಿಯಂತ್ರಣದತ್ತ ಕರ್ನಾಟಕವು ಹೊಸ ಸಂಶೋಧನಾ ಹೆಜ್ಜೆ ಇಟ್ಟಿದ್ದು, ಬೀದಿ ನಾಯಿಗಳಿಗೆ ನೀಡಬಹುದಾದ “ಓರಲ್ ರೇಬಿಸ್ ಲಸಿಕೆ” (Oral Vaccine) ಅಭಿವೃದ್ಧಿಪಡಿಸಲು ಅಧ್ಯಯನ ಆರಂಭಿಸಲಾಗಿದೆ.

ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಜೊತೆಗೂಡಿ ಈ ಮಹತ್ವದ ಸಂಶೋಧನೆ ನಡೆಸುತ್ತಿದೆ.  ಈ ಲಸಿಕೆಯನ್ನು ಬೀದಿ ನಾಯಿಗಳಿಗೆ ಮಾಂಸ ಅಥವಾ ಮೊಟ್ಟೆ ಮೂಲಕ ಆಹಾರ ರೂಪದಲ್ಲಿ ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ನಾಯಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ರೇಬಿಸ್ ನಿಯಂತ್ರಣಕ್ಕೆ ಮಹತ್ತರ ನೆರವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದ್ದಾರೆ.

ಈ ಸಂಶೋಧನಾ ಯೋಜನೆಗೆ ಹೈದ್ರಾಬಾದ್‌ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆ, ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಮಾಹಿತಿ ಸಂಸ್ಥೆ, ರಾಷ್ಟ್ರೀಯ ಪ್ರಾಣಿ ಸಂಪನ್ಮೂಲ ಸೌಲಭ್ಯ – ICMR, ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆ ಸಹಕಾರ ನೀಡುತ್ತಿದೆ. ಈ ಓರಲ್ ಲಸಿಕೆ ಅಭಿವೃದ್ಧಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ “ಒನ್ ಹೆಲ್ತ್ ಮಿಷನ್” ಅಡಿಯಲ್ಲಿ ₹2.89 ಕೋಟಿ ರೂಪಾಯಿ ಅನುದಾನ ನೀಡಿದೆ. ಬೀದಿ ನಾಯಿಗಳಲ್ಲಿನ ರೇಬಿಸ್ ನಿಯಂತ್ರಣದ ಮೂಲಕ ಮಾನವರಿಗೂ ಸೋಂಕು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೀಗಾಗಿ ಈ ಓರಲ್ ವ್ಯಾಕ್ಸಿನ್ ಸಂಶೋಧನೆ ರೇಬಿಸ್ ನಿರ್ಮೂಲನೆಗೆ ದೊಡ್ಡ ಕೊಡುಗೆಯಾಗಬಹುದು ಎಂದು  ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

15 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

15 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

15 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

23 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago